<p>ಬೆಂಗಳೂರು: ನಗರದಲ್ಲಿ ಮಂಗಳವಾರ ಮಧ್ಯಾಹ್ನದಿಂದ ಆರಂಭವಾದ ಮಳೆ ತಡರಾತ್ರಿಯವರೆಗೂ ಮುಂದುವರಿದಿತ್ತು. ಕೆ.ಆರ್. ಪುರ ವ್ಯಾಪ್ತಿಯಲ್ಲಿ ಐದು ಬಡಾವಣೆಗಳಿಗೆ ನೀರು ನುಗ್ಗಿದೆ. ನಗರದ ಬಹುತೇಕ ಎಲ್ಲ ರಸ್ತೆಗಳಲ್ಲೂ ನೀರು ನಿಂತಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿತ್ತು.</p>.<p>ನಗರದಲ್ಲಿ 11 ಸ್ಥಳಗಳಲ್ಲಿ ಮರಗಳು ಬುಡಮೇಲುಗೊಂಡಿವೆ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಕರೆಗಳು ಬಂದಿವೆ. ಈ ಮರಗಳನ್ನು ತೆರವು ಮಾಡುವಂತೆ ನಾಗರಿಕರು ಕೋರಿಕೊಂಡರು. ಸಿಬ್ಬಂದಿ ಸಾಧ್ಯವಾ ದಷ್ಟು ಕಡೆ ಕ್ರಮ ಕೈಗೊಂಡಿದ್ದಾರೆ.</p>.<p>ನಗರದ ರಾಜರಾಜೇಶ್ವರಿ ನಗರದಲ್ಲಿ ಮಂಗಳವಾರ ಅತ್ಯಧಿಕ ಮಳೆಯಾಗಿದೆ. ನಾಯಂಡಹಳ್ಳಿ, ಉತ್ತರಹಳ್ಳಿ, ವಿದ್ಯಾಪೀಠ, ಜಯನಗರ, ಗೊಟ್ಟಿಗೆರೆ, ನಾಗರಬಾವಿ, ಕೆಂಗೇರಿ, ಗಾಳಿ ಆಂಜನೇಯ ದೇವಸ್ಥಾನ, ಸಂಪಂಗಿರಾಮನಗರದಲ್ಲಿ ಹೆಚ್ಚು ಮಳೆಯಾಗಿದೆ. ಉಳಿದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ.</p>.<p>ರಾಜಕಾಲುವೆಯಿಂದ ಸಮಸ್ಯೆ: ‘ಕೆ.ಆರ್. ಪುರ ವ್ಯಾಪ್ತಿಯ ಸಾಯಿ, ಗುರುರಾಜ ಬಡಾವಣೆ ಸೇರಿ ಸುತ್ತ<br />ಮುತ್ತಲಿನ ಐದು ಬಡಾವಣೆಗಳಿಗೆ ಮಳೆನೀರು ನುಗ್ಗಿದೆ. ಹೊರಮಾವು ಪ್ರದೇಶಗಳಲ್ಲೂ ಮನೆಗಳಿಗೆ ನೀರು ತುಂಬಿದೆ. ರೈಲ್ವೆ ಸೇತುವೆ ಸಮೀಪದ ರಾಜಕಾಲುವೆ ಸಮಸ್ಯೆಯಿಂದಾಗಿ ನೀರು ಹೊರಗೆ ಬಂದಿದೆ’ ಎಂದು ಬಿಬಿಎಂಪಿ ಮಹದೇವಪುರ ವಲಯದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ತಿಳಿಸಿದರು.</p>.<p>‘ಸೋಮವಾರದಿಂದಲೂ ಈ ಭಾಗದಲ್ಲಿ ಮಳೆಯಾಗುತ್ತಿದೆ. ಒಂದು ಗಂಟೆಯಲ್ಲಿ 70 ಮಿ.ಮೀಗೂ ಹೆಚ್ಚಿನ ಮಳೆ ಬಂದರೆ ಸಮಸ್ಯೆ ಉಂಟಾಗುತ್ತದೆ. ಆಗ ರಾಜಕಾಲುವೆಗಳಲ್ಲಿ ಹೆಚ್ಚಿನ ಹರಿವು ಉಂಟಾಗಿ, ಬಡಾವಣೆಗಳಿಗೆ ನುಗ್ಗಿದೆ. ಈ ರಾಜಕಾಲುವೆಗಳ ದುಃಸ್ಥಿತಿಯಿಂದ ಹೀಗಾಗಿದೆ. ರಾಜಕಾಲುವೆಗಳ ದುರಸ್ತಿ ಹಾಗೂ ನಿರ್ವಹಣೆಗೆ ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಆರಂಭಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಕಾಂಪೌಂಡ್ ಕುಸಿತ: ‘ರಾಜರಾಜೇಶ್ವರಿ ನಗರ ವಲಯದ ಹೇರೋಹಳ್ಳಿ, ದೊಡ್ಡಬಿದರಕಲ್ಲುಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಒಂದು ಮನೆಯ ಕಾಂಪೌಂಡ್ ಕುಸಿದಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಎರಡು ಮರಗಳು ಬಿದ್ದಿದ್ದವು. ಅವುಗಳನ್ನು ತೆರವು ಮಾಡಲಾಗಿದೆ’ ಎಂದು ವಲಯ ಜಂಟಿ ಆಯುಕ್ತ ಡಾ. ನಾಗರಾಜ್ ತಿಳಿಸಿದರು.</p>.<p>ರಾಜರಾಜೇಶ್ವರಿ ನಗರ ವಲಯದಲ್ಲಿ ಕೆಲವು ಕಡೆ ಹೆಚ್ಚು ಮಳೆಯಾಗಿದ್ದರಿಂದ ರಸ್ತೆಯಲ್ಲಿ ನೀರು ನಿಂತಿತ್ತು. ಚರಂಡಿಯಲ್ಲಿನ ತ್ಯಾಜ್ಯ ತೆಗೆದು ನೀರು ಹರಿಯಲು ಸಿಬ್ಬಂದಿ ಅನುವು ಮಾಡಿಕೊಟ್ಟರು ಎಂದು ಹೇಳಿದರು.</p>.<p>ಹೊರವಲಯದ ಕೆಲವು ಪ್ರದೇಶಗಳಲ್ಲಿ ಮಳೆ ನೀರು, ಒಳಚರಂಡಿ ನೀರಿನ ಜೊತೆಗೆ ಹಾವುಗಳು ಒಳಬಂದಿದ್ದವು. ಇವುಗಳನ್ನು ನೆರೆಯವರು, ಸ್ಥಳೀಯವಾಗಿ ಹಾವು ಹಿಡಿಯುವವರ ಸಹಾಯದಿಂದ ಹೊರ ಹಾಕಲು ನಾಗರಿಕರು ಪರದಾಡಿದರು.</p>.<p>ನೆಲಮಂಗಲದ ಹೊನ್ನೇನಹಳ್ಳಿಯಲ್ಲಿ ವೃದ್ಧ ಹನುಮಂತಪ್ಪ ಅವರು ಪಕ್ಕದ ಮನೆ ಗೋಡೆ ಕುಸಿದು ಗಾಯಗೊಂಡಿದ್ದಾರೆ.</p>.<p>4.5 ಸೆಂ.ಮೀ ಮಳೆ: ಬೆಂಗಳೂರು ನಗರದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಿಗ್ಗೆವರೆಗೆ 4.5 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.39 ಸೆಂ.ಮೀ., ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 1.5 ಸೆಂ.ಮೀ. ಮಳೆಯಾಗಿದೆ. ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹಮಾಮಾನ ಇಲಾಖೆತಿಳಿಸಿದೆ.<br /></p>.<p><strong>ಅಧಿಕಾರಿಗಳ ವಿರುದ್ಧ ಆಕ್ರೋಶ</strong></p>.<p>‘ಪ್ರತಿ ಬಾರಿ ಮಳೆ ಬಂದಾಗಲೂ ನೀರು ಮನೆಗೆ ನುಗ್ಗುತ್ತದೆ. ಯಾವಾಗಲೂ ಮುಂದಿನ ಬಾರಿ ಸರಿ ಹೋಗುತ್ತೆ ಎಂದು ಜನಪ್ರತಿನಿಧಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ವರ್ಷಗಳಿಂದ ಈ ಸಮಸ್ಯೆ ಪರಿಹರಿಸಿಲ್ಲ’ ಎಂದು ಹೊರಮಾವು ಸಾಯಿ ಬಡಾವಣೆ ನಿವಾಸಿ ರಾಜಗೋಪಾಲ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ರಾಜಕಾಲುವೆ ಒತ್ತುವರಿ, ಅಲ್ಲಿರುವ ಹೂಳಿನಿಂದಲೇ ಈ ರೀತಿ ನೀರು ಪ್ರವಾಹವಾಗಿ ರಸ್ತೆಗಳಲ್ಲಿ ಹರಿಯುತ್ತಿದೆ. ಮುಖ್ಯಮಂತ್ರಿ, ಶಾಸಕರು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದರೆ ನಗರದ ಯಾವ ಭಾಗದಲ್ಲೂ ಈ ಕೆಲಸವಾಗಿಲ್ಲ. ಹೀಗಾಗಿಯೇ ಎಲ್ಲೆಡೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಮನೆಗಳಿಗೂ ನುಗ್ಗುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿ ಮಂಗಳವಾರ ಮಧ್ಯಾಹ್ನದಿಂದ ಆರಂಭವಾದ ಮಳೆ ತಡರಾತ್ರಿಯವರೆಗೂ ಮುಂದುವರಿದಿತ್ತು. ಕೆ.ಆರ್. ಪುರ ವ್ಯಾಪ್ತಿಯಲ್ಲಿ ಐದು ಬಡಾವಣೆಗಳಿಗೆ ನೀರು ನುಗ್ಗಿದೆ. ನಗರದ ಬಹುತೇಕ ಎಲ್ಲ ರಸ್ತೆಗಳಲ್ಲೂ ನೀರು ನಿಂತಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿತ್ತು.</p>.<p>ನಗರದಲ್ಲಿ 11 ಸ್ಥಳಗಳಲ್ಲಿ ಮರಗಳು ಬುಡಮೇಲುಗೊಂಡಿವೆ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಕರೆಗಳು ಬಂದಿವೆ. ಈ ಮರಗಳನ್ನು ತೆರವು ಮಾಡುವಂತೆ ನಾಗರಿಕರು ಕೋರಿಕೊಂಡರು. ಸಿಬ್ಬಂದಿ ಸಾಧ್ಯವಾ ದಷ್ಟು ಕಡೆ ಕ್ರಮ ಕೈಗೊಂಡಿದ್ದಾರೆ.</p>.<p>ನಗರದ ರಾಜರಾಜೇಶ್ವರಿ ನಗರದಲ್ಲಿ ಮಂಗಳವಾರ ಅತ್ಯಧಿಕ ಮಳೆಯಾಗಿದೆ. ನಾಯಂಡಹಳ್ಳಿ, ಉತ್ತರಹಳ್ಳಿ, ವಿದ್ಯಾಪೀಠ, ಜಯನಗರ, ಗೊಟ್ಟಿಗೆರೆ, ನಾಗರಬಾವಿ, ಕೆಂಗೇರಿ, ಗಾಳಿ ಆಂಜನೇಯ ದೇವಸ್ಥಾನ, ಸಂಪಂಗಿರಾಮನಗರದಲ್ಲಿ ಹೆಚ್ಚು ಮಳೆಯಾಗಿದೆ. ಉಳಿದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ.</p>.<p>ರಾಜಕಾಲುವೆಯಿಂದ ಸಮಸ್ಯೆ: ‘ಕೆ.ಆರ್. ಪುರ ವ್ಯಾಪ್ತಿಯ ಸಾಯಿ, ಗುರುರಾಜ ಬಡಾವಣೆ ಸೇರಿ ಸುತ್ತ<br />ಮುತ್ತಲಿನ ಐದು ಬಡಾವಣೆಗಳಿಗೆ ಮಳೆನೀರು ನುಗ್ಗಿದೆ. ಹೊರಮಾವು ಪ್ರದೇಶಗಳಲ್ಲೂ ಮನೆಗಳಿಗೆ ನೀರು ತುಂಬಿದೆ. ರೈಲ್ವೆ ಸೇತುವೆ ಸಮೀಪದ ರಾಜಕಾಲುವೆ ಸಮಸ್ಯೆಯಿಂದಾಗಿ ನೀರು ಹೊರಗೆ ಬಂದಿದೆ’ ಎಂದು ಬಿಬಿಎಂಪಿ ಮಹದೇವಪುರ ವಲಯದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ತಿಳಿಸಿದರು.</p>.<p>‘ಸೋಮವಾರದಿಂದಲೂ ಈ ಭಾಗದಲ್ಲಿ ಮಳೆಯಾಗುತ್ತಿದೆ. ಒಂದು ಗಂಟೆಯಲ್ಲಿ 70 ಮಿ.ಮೀಗೂ ಹೆಚ್ಚಿನ ಮಳೆ ಬಂದರೆ ಸಮಸ್ಯೆ ಉಂಟಾಗುತ್ತದೆ. ಆಗ ರಾಜಕಾಲುವೆಗಳಲ್ಲಿ ಹೆಚ್ಚಿನ ಹರಿವು ಉಂಟಾಗಿ, ಬಡಾವಣೆಗಳಿಗೆ ನುಗ್ಗಿದೆ. ಈ ರಾಜಕಾಲುವೆಗಳ ದುಃಸ್ಥಿತಿಯಿಂದ ಹೀಗಾಗಿದೆ. ರಾಜಕಾಲುವೆಗಳ ದುರಸ್ತಿ ಹಾಗೂ ನಿರ್ವಹಣೆಗೆ ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಆರಂಭಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಕಾಂಪೌಂಡ್ ಕುಸಿತ: ‘ರಾಜರಾಜೇಶ್ವರಿ ನಗರ ವಲಯದ ಹೇರೋಹಳ್ಳಿ, ದೊಡ್ಡಬಿದರಕಲ್ಲುಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಒಂದು ಮನೆಯ ಕಾಂಪೌಂಡ್ ಕುಸಿದಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಎರಡು ಮರಗಳು ಬಿದ್ದಿದ್ದವು. ಅವುಗಳನ್ನು ತೆರವು ಮಾಡಲಾಗಿದೆ’ ಎಂದು ವಲಯ ಜಂಟಿ ಆಯುಕ್ತ ಡಾ. ನಾಗರಾಜ್ ತಿಳಿಸಿದರು.</p>.<p>ರಾಜರಾಜೇಶ್ವರಿ ನಗರ ವಲಯದಲ್ಲಿ ಕೆಲವು ಕಡೆ ಹೆಚ್ಚು ಮಳೆಯಾಗಿದ್ದರಿಂದ ರಸ್ತೆಯಲ್ಲಿ ನೀರು ನಿಂತಿತ್ತು. ಚರಂಡಿಯಲ್ಲಿನ ತ್ಯಾಜ್ಯ ತೆಗೆದು ನೀರು ಹರಿಯಲು ಸಿಬ್ಬಂದಿ ಅನುವು ಮಾಡಿಕೊಟ್ಟರು ಎಂದು ಹೇಳಿದರು.</p>.<p>ಹೊರವಲಯದ ಕೆಲವು ಪ್ರದೇಶಗಳಲ್ಲಿ ಮಳೆ ನೀರು, ಒಳಚರಂಡಿ ನೀರಿನ ಜೊತೆಗೆ ಹಾವುಗಳು ಒಳಬಂದಿದ್ದವು. ಇವುಗಳನ್ನು ನೆರೆಯವರು, ಸ್ಥಳೀಯವಾಗಿ ಹಾವು ಹಿಡಿಯುವವರ ಸಹಾಯದಿಂದ ಹೊರ ಹಾಕಲು ನಾಗರಿಕರು ಪರದಾಡಿದರು.</p>.<p>ನೆಲಮಂಗಲದ ಹೊನ್ನೇನಹಳ್ಳಿಯಲ್ಲಿ ವೃದ್ಧ ಹನುಮಂತಪ್ಪ ಅವರು ಪಕ್ಕದ ಮನೆ ಗೋಡೆ ಕುಸಿದು ಗಾಯಗೊಂಡಿದ್ದಾರೆ.</p>.<p>4.5 ಸೆಂ.ಮೀ ಮಳೆ: ಬೆಂಗಳೂರು ನಗರದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಿಗ್ಗೆವರೆಗೆ 4.5 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.39 ಸೆಂ.ಮೀ., ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 1.5 ಸೆಂ.ಮೀ. ಮಳೆಯಾಗಿದೆ. ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹಮಾಮಾನ ಇಲಾಖೆತಿಳಿಸಿದೆ.<br /></p>.<p><strong>ಅಧಿಕಾರಿಗಳ ವಿರುದ್ಧ ಆಕ್ರೋಶ</strong></p>.<p>‘ಪ್ರತಿ ಬಾರಿ ಮಳೆ ಬಂದಾಗಲೂ ನೀರು ಮನೆಗೆ ನುಗ್ಗುತ್ತದೆ. ಯಾವಾಗಲೂ ಮುಂದಿನ ಬಾರಿ ಸರಿ ಹೋಗುತ್ತೆ ಎಂದು ಜನಪ್ರತಿನಿಧಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ವರ್ಷಗಳಿಂದ ಈ ಸಮಸ್ಯೆ ಪರಿಹರಿಸಿಲ್ಲ’ ಎಂದು ಹೊರಮಾವು ಸಾಯಿ ಬಡಾವಣೆ ನಿವಾಸಿ ರಾಜಗೋಪಾಲ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ರಾಜಕಾಲುವೆ ಒತ್ತುವರಿ, ಅಲ್ಲಿರುವ ಹೂಳಿನಿಂದಲೇ ಈ ರೀತಿ ನೀರು ಪ್ರವಾಹವಾಗಿ ರಸ್ತೆಗಳಲ್ಲಿ ಹರಿಯುತ್ತಿದೆ. ಮುಖ್ಯಮಂತ್ರಿ, ಶಾಸಕರು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದರೆ ನಗರದ ಯಾವ ಭಾಗದಲ್ಲೂ ಈ ಕೆಲಸವಾಗಿಲ್ಲ. ಹೀಗಾಗಿಯೇ ಎಲ್ಲೆಡೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಮನೆಗಳಿಗೂ ನುಗ್ಗುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>