<p><strong>ಬೆಂಗಳೂರು</strong>: ಗಣೇಶೋತ್ಸವದ ಪ್ರಯುಕ್ತ ಬೆಂಗಳೂರಿನಿಂದ ತಮ್ಮೂರಿನತ್ತ ಹೊರಟವರ ಸಂಖ್ಯೆ ಶನಿವಾರ ಒಂದೇ ಪ್ರಮಾಣದಲ್ಲಿ ಏರಿದ್ದರಿಂದ ಮೆಜೆಸ್ಟಿಕ್ ಸಹಿತ ವಿವಿಧ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭಾರಿ ಜನದಟ್ಟಣೆ ಉಂಟಾಯಿತು. </p>.<p>ಶುಕ್ರವಾರವೇ ಜನಸಂದಣಿ ಕಂಡು ಬಂದಿತ್ತು. ಶನಿವಾರ ದಟ್ಟಣೆ ಇನ್ನಷ್ಟು ಹೆಚ್ಚಾಯಿತು. ಜನರು ಲಗೇಜುಗಳೊಂದಿಗೆ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಸ್ಯಾಟ್ಲೈಟ್ ಬಸ್ ನಿಲ್ದಾಣಗಳ ಕಡೆಗೆ ಗುಂಪು ಗುಂಪಾಗಿ ಬರತೊಡಗಿದ್ದರು. </p>.<p>ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರ್ಗಿ ಸಹಿತ ವಿವಿಧ ನಗರಗಳಿಗೆ ಹೋಗುವವರು ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ ಬಸ್, ರೈಲು ನಿಲ್ದಾಣಗಳು ಕಿಕ್ಕಿರಿದವು. ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದ ಜನ, ನಿಲ್ದಾಣಕ್ಕೆ ಬಂದು ಬಸ್ಗಾಗಿ ಹುಡುಕಾಟ ನಡೆಸಿದರು.</p>.<p>ಚಾಲುಕ್ಯ ವೃತ್ತ, ಆನಂದರಾವ್ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್ಎಂಸಿ ಯಾರ್ಡ್, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿತ್ತು.</p>.<p><strong>ದುಪ್ಪಟ್ಟು ದರ:</strong> 742 ಪ್ರಕರಣ ದಾಖಲು ಖಾಸಗಿ ಬಸ್ಗಳ ಪ್ರಯಾಣಿಕರಿಗೆ ದುಪ್ಪಟ್ಟು ದರ ನಿಗದಿ ಮಾಡಿದ್ದಕ್ಕಾಗಿ ಸಾರಿಗೆ ಇಲಾಖೆ ಎರಡು ದಿನಗಳಲ್ಲಿ 742 ಪ್ರಕರಣ ದಾಖಲಿಸಿಕೊಂಡಿದೆ. ₹ 9.24 ಲಕ್ಷ ದಂಡ ವಸೂಲಿ ಮಾಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗಣೇಶೋತ್ಸವದ ಪ್ರಯುಕ್ತ ಬೆಂಗಳೂರಿನಿಂದ ತಮ್ಮೂರಿನತ್ತ ಹೊರಟವರ ಸಂಖ್ಯೆ ಶನಿವಾರ ಒಂದೇ ಪ್ರಮಾಣದಲ್ಲಿ ಏರಿದ್ದರಿಂದ ಮೆಜೆಸ್ಟಿಕ್ ಸಹಿತ ವಿವಿಧ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭಾರಿ ಜನದಟ್ಟಣೆ ಉಂಟಾಯಿತು. </p>.<p>ಶುಕ್ರವಾರವೇ ಜನಸಂದಣಿ ಕಂಡು ಬಂದಿತ್ತು. ಶನಿವಾರ ದಟ್ಟಣೆ ಇನ್ನಷ್ಟು ಹೆಚ್ಚಾಯಿತು. ಜನರು ಲಗೇಜುಗಳೊಂದಿಗೆ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಸ್ಯಾಟ್ಲೈಟ್ ಬಸ್ ನಿಲ್ದಾಣಗಳ ಕಡೆಗೆ ಗುಂಪು ಗುಂಪಾಗಿ ಬರತೊಡಗಿದ್ದರು. </p>.<p>ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರ್ಗಿ ಸಹಿತ ವಿವಿಧ ನಗರಗಳಿಗೆ ಹೋಗುವವರು ನಿಲ್ದಾಣಗಳಲ್ಲಿ ಜಮಾಯಿಸಿದ್ದರಿಂದ ಬಸ್, ರೈಲು ನಿಲ್ದಾಣಗಳು ಕಿಕ್ಕಿರಿದವು. ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದ ಜನ, ನಿಲ್ದಾಣಕ್ಕೆ ಬಂದು ಬಸ್ಗಾಗಿ ಹುಡುಕಾಟ ನಡೆಸಿದರು.</p>.<p>ಚಾಲುಕ್ಯ ವೃತ್ತ, ಆನಂದರಾವ್ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್ಎಂಸಿ ಯಾರ್ಡ್, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿತ್ತು.</p>.<p><strong>ದುಪ್ಪಟ್ಟು ದರ:</strong> 742 ಪ್ರಕರಣ ದಾಖಲು ಖಾಸಗಿ ಬಸ್ಗಳ ಪ್ರಯಾಣಿಕರಿಗೆ ದುಪ್ಪಟ್ಟು ದರ ನಿಗದಿ ಮಾಡಿದ್ದಕ್ಕಾಗಿ ಸಾರಿಗೆ ಇಲಾಖೆ ಎರಡು ದಿನಗಳಲ್ಲಿ 742 ಪ್ರಕರಣ ದಾಖಲಿಸಿಕೊಂಡಿದೆ. ₹ 9.24 ಲಕ್ಷ ದಂಡ ವಸೂಲಿ ಮಾಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>