ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರಮನೆ ಮೈದಾನದಲ್ಲಿ ಕಂಬಳ: ಇಂದು-ನಾಳೆ ಭಾರಿ ವಾಹನಗಳ‌ ಸಂಚಾರ ನಿಷೇಧ

Published 25 ನವೆಂಬರ್ 2023, 5:29 IST
Last Updated 25 ನವೆಂಬರ್ 2023, 5:29 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ‌ ಕಂಬಳ ಆಯೋಜಿಸಲಾಗಿದ್ದು, ಶನಿವಾರ ಹಾಗೂ ಭಾನುವಾರ (ನ. 25 ಹಾಗೂ ನ. 26) ವಾಹನಗಳ ದಟ್ಟಣೆ ಉಂಟಾಗದಂತೆ ತಡೆಯಲು ಸಂಚಾರ ಮಾರ್ಗ ಬದಲಾವಣೆ ‌ಮಾಡಲಾಗಿದೆ.

'ಬಿಎಚ್‌ಇಎಲ್ ವೃತ್ತ/ಐಐಎಸ್ಸಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣವರೆಗೆ, ಹೆಬ್ಬಾಳ ಜಂಕ್ಷನ್ ಹಾಗೂ ಕಾವೇರಿ ಸಿನಿಮಂದಿರದಿಂದ ಬಸವೇಶ್ವರ ವೃತ್ತದವರೆಗೆ (ಚಾಲುಕ್ಯ ವೃತ್ತ) ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ' ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ತಿಳಿಸಿದರು.

'ಪ್ಯಾಲೇಸ್ ರಸ್ತೆ, ವಸಂತನಗರ ರಸ್ತೆ, ನಂದಿದುರ್ಗ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಜಯಮಹಲ್ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ ಹಾಗೂ‌ ಮೌಂಟ್ ಕಾರ್ಮೆಲ್ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ' ಎಂದು ಹೇಳಿದರು.

ಬದಲಿ‌ ಮಾರ್ಗ ಬಳಸಲು ಕೋರಿಕೆ

ಅರಮನೆ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಮೈದಾನ ಸುತ್ತಮುತ್ತಲಿನ ರಸ್ತೆಗಳಲ್ಲಿ ದಟ್ಟಣೆ ಉಂಟಾಗುವ ‌ಸಾಧ್ಯತೆ ಇದೆ. ಜನರು ಸಂಚಾರಕ್ಕಾಗಿ ಬದಲಿ ಮಾರ್ಗ ಬಳಸುವಂತೆ ಪೊಲೀಸರು ಕೋರಿದ್ದಾರೆ.

'ಅರಮನೆ ರಸ್ತೆ, ಎಂ.ವಿ. ಜಯರಾಮ್ ರಸ್ತೆ, ಬಳ್ಳಾರಿ ರಸ್ತೆ, ಕನ್ನಿಂಗ್ ಹ್ಯಾಂ‌ ರಸ್ತೆ, ಮಿಲ್ಲರ್ಸ್ ವೃತ್ತ, ಜಯಮಹಲ್ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ ಇದೆ. ಈ ರಸ್ತೆ ಬದಲು ಬೇರೆ ಮಾರ್ಗದಲ್ಲಿ‌ ಸಾರ್ವಜನಿಕರು ಸಂಚರಿಸಬೇಕು' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT