<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂದು ಹೇಳಿಕೊಂಡು ಮಹಿಳೆಯರಿಂದ ₹ 20 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಂಚನೆಗೀಡಾಗಿರುವ ಮಹಿಳೆಯರು ಡಿ. 6ರಂದು ದೂರು ನೀಡಿದ್ದಾರೆ. ಅದರನ್ವಯ ಆರೋಪಿಗಳಾದ ಎಂ.ಸಿ.ನಾಗರಾಜ್ ಹಾಗೂ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಚನ್ನಗಿರಿ ತಾಲ್ಲೂಕಿನ ಚಿಕ್ಕೋಲಿಕೆರೆ ಗ್ರಾಮದ ಜಗದೀಶ್, ಪರಿಚಯಸ್ಥ ಮಹಿಳೆಯೊಬ್ಬರಿಗೆ ಸರ್ಕಾರದ ಯೋಜನೆಗಳಡಿ ಸೌಲಭ್ಯ ಕಲ್ಪಿಸುವುದಾಗಿ ಹೇಳಿದ್ದರು. ಎಂ.ಸಿ.ನಾಗರಾಜ್ ಅವರನ್ನೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂದು ಹೇಳಿ ಮಹಿಳೆಗೆ ಪರಿಚಯ ಮಾಡಿಸಿದ್ದರು.’</p>.<p>‘ಸರ್ಕಾರದ ವಿವಿಧ ಯೋಜನೆಗಳಡಿ ತಲಾ ₹8 ಲಕ್ಷ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು, ಅದಕ್ಕಾಗಿ ಏಳು ಮಹಿಳೆಯರಿಂದ ₹ 20 ಲಕ್ಷ ಪಡೆದುಕೊಂಡಿದ್ದರು. ಅದಾದ ನಂತರ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂದು ಹೇಳಿಕೊಂಡು ಮಹಿಳೆಯರಿಂದ ₹ 20 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಂಚನೆಗೀಡಾಗಿರುವ ಮಹಿಳೆಯರು ಡಿ. 6ರಂದು ದೂರು ನೀಡಿದ್ದಾರೆ. ಅದರನ್ವಯ ಆರೋಪಿಗಳಾದ ಎಂ.ಸಿ.ನಾಗರಾಜ್ ಹಾಗೂ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಚನ್ನಗಿರಿ ತಾಲ್ಲೂಕಿನ ಚಿಕ್ಕೋಲಿಕೆರೆ ಗ್ರಾಮದ ಜಗದೀಶ್, ಪರಿಚಯಸ್ಥ ಮಹಿಳೆಯೊಬ್ಬರಿಗೆ ಸರ್ಕಾರದ ಯೋಜನೆಗಳಡಿ ಸೌಲಭ್ಯ ಕಲ್ಪಿಸುವುದಾಗಿ ಹೇಳಿದ್ದರು. ಎಂ.ಸಿ.ನಾಗರಾಜ್ ಅವರನ್ನೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂದು ಹೇಳಿ ಮಹಿಳೆಗೆ ಪರಿಚಯ ಮಾಡಿಸಿದ್ದರು.’</p>.<p>‘ಸರ್ಕಾರದ ವಿವಿಧ ಯೋಜನೆಗಳಡಿ ತಲಾ ₹8 ಲಕ್ಷ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು, ಅದಕ್ಕಾಗಿ ಏಳು ಮಹಿಳೆಯರಿಂದ ₹ 20 ಲಕ್ಷ ಪಡೆದುಕೊಂಡಿದ್ದರು. ಅದಾದ ನಂತರ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>