<p><strong>ಬೆಂಗಳೂರು:</strong> ಹೆಬ್ಬಾಳ ಜಂಕ್ಷನ್ ಬಳಿ ನಿರ್ಮಾಣವಾಗಿರುವ 700 ಮೀಟರ್ ಉದ್ದದ ಪಥದಲ್ಲಿ ಪ್ರಾಯೋಗಿಕ ಸಂಚಾರಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೊನೆಗೂ ಅವಕಾಶ ನೀಡಿದೆ.</p>.<p>ಇದು ವಾಹನ ದಟ್ಟಣೆ ನಿವಾರಣೆಗೆ ಸಹಕಾರಿಯಾಗಿದ್ದು, ಈ ಪಥವು (ಲೂಪ್) ಕೆ.ಆರ್. ಪುರವನ್ನು ಸಂಪರ್ಕಿಸಲಿದೆ. ಸುಮಾರು ಎರಡು ವಾರಗಳ ಹಿಂದೆಯೇ ಸಿದ್ಧವಾಗಿದ್ದರೂ, ಉದ್ಘಾಟನಾ ಸಮಾರಂಭದ ಕಾರಣ ಬಿಡಿಎ ಇಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ.</p>.<p>ಇತ್ತೀಚೆಗೆ ಮೇಲ್ಸೇತುವೆ ಪರಿಶೀಲಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದ ಬಳಿಕ ಎಲಿವೇಟೆಡ್ ಲೂಪ್ ಅನ್ನು ಉದ್ಘಾಟಿಸಲಾಗುವುದು’ ಎಂದು ಹೇಳಿದ್ದರು. ಅದಾಗಿಯೂ, ಬಿಡಿಎ ಪ್ರಾಯೋಗಿಕವಾಗಿ ಬುಧವಾರ ಮಧ್ಯಾಹ್ನದಿಂದ ಸಂಚಾರಕ್ಕೆ ಅವಕಾಶ ನೀಡಿದೆ. </p>.<p>‘ಹೊಸದಾಗಿ ನಿರ್ಮಿಸಲಾದ ಈ ಲೂಪ್ನಲ್ಲಿ ನಿರೀಕ್ಷೆಯಂತೆ ಹೆಚ್ಚಿನ ದಟ್ಟಣೆ ಕಂಡುಬಂದಿಲ್ಲ’ ಎಂದು ಸಂಚಾರ ಪೊಲೀಸರು ತಿಳಿಸಿದರು. </p>.<p>ಕೊಡಿಗೇಹಳ್ಳಿ, ಸಹಕಾರನಗರ ಒಳಗೊಂಡಂತೆ ವಿಮಾನ ನಿಲ್ದಾಣದ ಕಡೆಯಿಂದ ನಗರದ ಕಡೆಗೆ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆಯಲ್ಲಿ ಎರಡು ಪಥಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಲೂಪ್ ಮೂರು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಬ್ಬಾಳ ಜಂಕ್ಷನ್ ಬಳಿ ನಿರ್ಮಾಣವಾಗಿರುವ 700 ಮೀಟರ್ ಉದ್ದದ ಪಥದಲ್ಲಿ ಪ್ರಾಯೋಗಿಕ ಸಂಚಾರಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೊನೆಗೂ ಅವಕಾಶ ನೀಡಿದೆ.</p>.<p>ಇದು ವಾಹನ ದಟ್ಟಣೆ ನಿವಾರಣೆಗೆ ಸಹಕಾರಿಯಾಗಿದ್ದು, ಈ ಪಥವು (ಲೂಪ್) ಕೆ.ಆರ್. ಪುರವನ್ನು ಸಂಪರ್ಕಿಸಲಿದೆ. ಸುಮಾರು ಎರಡು ವಾರಗಳ ಹಿಂದೆಯೇ ಸಿದ್ಧವಾಗಿದ್ದರೂ, ಉದ್ಘಾಟನಾ ಸಮಾರಂಭದ ಕಾರಣ ಬಿಡಿಎ ಇಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ.</p>.<p>ಇತ್ತೀಚೆಗೆ ಮೇಲ್ಸೇತುವೆ ಪರಿಶೀಲಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದ ಬಳಿಕ ಎಲಿವೇಟೆಡ್ ಲೂಪ್ ಅನ್ನು ಉದ್ಘಾಟಿಸಲಾಗುವುದು’ ಎಂದು ಹೇಳಿದ್ದರು. ಅದಾಗಿಯೂ, ಬಿಡಿಎ ಪ್ರಾಯೋಗಿಕವಾಗಿ ಬುಧವಾರ ಮಧ್ಯಾಹ್ನದಿಂದ ಸಂಚಾರಕ್ಕೆ ಅವಕಾಶ ನೀಡಿದೆ. </p>.<p>‘ಹೊಸದಾಗಿ ನಿರ್ಮಿಸಲಾದ ಈ ಲೂಪ್ನಲ್ಲಿ ನಿರೀಕ್ಷೆಯಂತೆ ಹೆಚ್ಚಿನ ದಟ್ಟಣೆ ಕಂಡುಬಂದಿಲ್ಲ’ ಎಂದು ಸಂಚಾರ ಪೊಲೀಸರು ತಿಳಿಸಿದರು. </p>.<p>ಕೊಡಿಗೇಹಳ್ಳಿ, ಸಹಕಾರನಗರ ಒಳಗೊಂಡಂತೆ ವಿಮಾನ ನಿಲ್ದಾಣದ ಕಡೆಯಿಂದ ನಗರದ ಕಡೆಗೆ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆಯಲ್ಲಿ ಎರಡು ಪಥಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಲೂಪ್ ಮೂರು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>