<p><strong>ಬೆಂಗಳೂರು:</strong> ಪತ್ನಿ ಸುಧಾ ಅವರನ್ನು ಬೆಂಕಿ ಹಚ್ಚಿ ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪತಿ ಸುಬ್ರಮಣಿ ಅಲಿಯಾಸ್ ಮೌಲ್ವಿ ಹುಸೇನ್ ಸಿಕಂದರ್ ಬಾಷಾ, 31 ವರ್ಷಗಳ ಬಳಿಕ ಹೆಬ್ಬಾಳ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ಹೆಬ್ಬಾಳ ನಿವಾಸಿ ಸುಬ್ರಮಣಿ, ಪತ್ನಿ ಸುಧಾ ಅವರನ್ನು 1993ರಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಚಿಕ್ಕಮಗಳೂರಿನ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ ಈತನನ್ನು ಇತ್ತೀಚೆಗೆ ಬಂಧಿಸಿ, ನಗರಕ್ಕೆ ಕರೆತರಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p><strong>ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ:</strong> </p><p>‘ಸುಬ್ರಮಣಿ ಹಾಗೂ ಸುಧಾ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಕೊಲೆ ಮಾಡಲು ತೀರ್ಮಾನಿಸಿದ್ದ ಸುಬ್ರಮಣಿ, ಸುಧಾ ಅವರ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ತೀವ್ರ ಗಾಯಗೊಂಡು ಸುಧಾ ಮೃತಪಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಕೊಲೆ ಪ್ರಕರಣ ದಾಖಲಿಸಿ ಆರೋಪಿ ಸುಬ್ರಮಣಿಯನ್ನು ಬಂಧಿಸಲಾಗಿತ್ತು. ಕೆಲದಿನದ ನಂತರ ಈತ, ಜಾಮೀನು ಮೇಲೆ ಹೊರಗೆ ಬಂದಿದ್ದ. ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ. ಈತನ ಬಂಧನಕ್ಕಾಗಿ ಜಾಮೀನು ರಹಿತ ವಾರಂಟ್ ಸಹ ಜಾರಿಯಾಗಿದ್ದವು’ ಎಂದು ಹೇಳಿವೆ.</p>.<p>ಕೇರಳಕ್ಕೆ ಸ್ಥಳಾಂತರ, ಮುಸ್ಲಿಂ ಹೆಸರು: ‘ಬೆಂಗಳೂರು ತೊರೆದು ಕೇರಳಕ್ಕೆ ಹೋಗಿದ್ದ ಸುಬ್ರಮಣಿ, ಅಲ್ಲಿಯೇ ಸಣ್ಣ–ಪುಟ್ಟ ಕೆಲಸ ಮಾಡಿ ಕೊಂಡಿದ್ದ. ಪೊಲೀಸರು ತನ್ನನ್ನು ಬಂಧಿಸಬಹುದೆಂಬ ಭೀತಿ ಆರೋಪಿ<br>ಗಿತ್ತು. ಹೀಗಾಗಿ, ಸುಬ್ರಮಣಿ ತನ್ನ ಹೆಸರನ್ನು ಹುಸೇನ್ ಸಿಕಂದರ್ ಬಾಷಾ ಎಂಬುದಾಗಿ ಬದಲಾಯಿಸಿಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ತಾನೊಬ್ಬ ಮುಸ್ಲಿಂ ಎಂಬುದಾಗಿ ಹೇಳಿ ಸ್ಥಳೀಯರ ಜೊತೆ ಒಡನಾಟ ಬೆಳೆಸಿದ್ದ. ಮುಸ್ಲಿಂ ಧಾರ್ಮಿಕ ಆಚರಣೆ ಬಗ್ಗೆ ತಿಳಿದುಕೊಂಡು, ಪಾಲಿಸುತ್ತಿದ್ದ. ಈತ ಹಿಂದೂ ಎಂಬ ಬಗ್ಗೆ ಯಾರಿಗೂ ಅನುಮಾನ ಬಂದಿರಲಿಲ್ಲ’ ಎಂದು ಮೂಲಗಳು ಹೇಳಿವೆ.</p>.<p><strong>ಚಿಕ್ಕಮಗಳೂರು ಮಸೀದಿಯಲ್ಲಿ ವಾಸ:</strong></p><p>‘ಕೇರಳದಿಂದ ಚಿಕ್ಕಮಗಳೂರಿಗೆ ಬಂದಿದ್ದ ಈತ, ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ. ಮಸೀದಿ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ. ಈತನ ಇರುವಿಕೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಚಿಕ್ಕಮಗಳೂರಿಗೆ ಹೋಗಿದ್ದ ವಿಶೇಷ ತಂಡ, ಹಲವು ದಿನಗಳವರೆಗೆ ಆರೋಪಿ ಮೇಲೆ ನಿಗಾ ವಹಿಸಿತ್ತು’ ಎಂದು ಮೂಲಗಳು ಹೇಳಿವೆ.</p>.<p>‘ಮೌಲ್ವಿ ಆಗಿರುವ ವ್ಯಕ್ತಿಯೇ ಸುಬ್ರಮಣಿ ಎಂಬುದಕ್ಕೆ ಕೆಲ ಸುಳಿವುಗಳು ಸಿಕ್ಕಿದ್ದವು. ಸ್ಥಳೀಯ ಪೊಲೀಸರ ನೆರವಿನಿಂದ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪತ್ನಿ ಸುಧಾ ಅವರನ್ನು ಬೆಂಕಿ ಹಚ್ಚಿ ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪತಿ ಸುಬ್ರಮಣಿ ಅಲಿಯಾಸ್ ಮೌಲ್ವಿ ಹುಸೇನ್ ಸಿಕಂದರ್ ಬಾಷಾ, 31 ವರ್ಷಗಳ ಬಳಿಕ ಹೆಬ್ಬಾಳ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ಹೆಬ್ಬಾಳ ನಿವಾಸಿ ಸುಬ್ರಮಣಿ, ಪತ್ನಿ ಸುಧಾ ಅವರನ್ನು 1993ರಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಚಿಕ್ಕಮಗಳೂರಿನ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ ಈತನನ್ನು ಇತ್ತೀಚೆಗೆ ಬಂಧಿಸಿ, ನಗರಕ್ಕೆ ಕರೆತರಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p><strong>ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ:</strong> </p><p>‘ಸುಬ್ರಮಣಿ ಹಾಗೂ ಸುಧಾ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಕೊಲೆ ಮಾಡಲು ತೀರ್ಮಾನಿಸಿದ್ದ ಸುಬ್ರಮಣಿ, ಸುಧಾ ಅವರ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ತೀವ್ರ ಗಾಯಗೊಂಡು ಸುಧಾ ಮೃತಪಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಕೊಲೆ ಪ್ರಕರಣ ದಾಖಲಿಸಿ ಆರೋಪಿ ಸುಬ್ರಮಣಿಯನ್ನು ಬಂಧಿಸಲಾಗಿತ್ತು. ಕೆಲದಿನದ ನಂತರ ಈತ, ಜಾಮೀನು ಮೇಲೆ ಹೊರಗೆ ಬಂದಿದ್ದ. ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ. ಈತನ ಬಂಧನಕ್ಕಾಗಿ ಜಾಮೀನು ರಹಿತ ವಾರಂಟ್ ಸಹ ಜಾರಿಯಾಗಿದ್ದವು’ ಎಂದು ಹೇಳಿವೆ.</p>.<p>ಕೇರಳಕ್ಕೆ ಸ್ಥಳಾಂತರ, ಮುಸ್ಲಿಂ ಹೆಸರು: ‘ಬೆಂಗಳೂರು ತೊರೆದು ಕೇರಳಕ್ಕೆ ಹೋಗಿದ್ದ ಸುಬ್ರಮಣಿ, ಅಲ್ಲಿಯೇ ಸಣ್ಣ–ಪುಟ್ಟ ಕೆಲಸ ಮಾಡಿ ಕೊಂಡಿದ್ದ. ಪೊಲೀಸರು ತನ್ನನ್ನು ಬಂಧಿಸಬಹುದೆಂಬ ಭೀತಿ ಆರೋಪಿ<br>ಗಿತ್ತು. ಹೀಗಾಗಿ, ಸುಬ್ರಮಣಿ ತನ್ನ ಹೆಸರನ್ನು ಹುಸೇನ್ ಸಿಕಂದರ್ ಬಾಷಾ ಎಂಬುದಾಗಿ ಬದಲಾಯಿಸಿಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ತಾನೊಬ್ಬ ಮುಸ್ಲಿಂ ಎಂಬುದಾಗಿ ಹೇಳಿ ಸ್ಥಳೀಯರ ಜೊತೆ ಒಡನಾಟ ಬೆಳೆಸಿದ್ದ. ಮುಸ್ಲಿಂ ಧಾರ್ಮಿಕ ಆಚರಣೆ ಬಗ್ಗೆ ತಿಳಿದುಕೊಂಡು, ಪಾಲಿಸುತ್ತಿದ್ದ. ಈತ ಹಿಂದೂ ಎಂಬ ಬಗ್ಗೆ ಯಾರಿಗೂ ಅನುಮಾನ ಬಂದಿರಲಿಲ್ಲ’ ಎಂದು ಮೂಲಗಳು ಹೇಳಿವೆ.</p>.<p><strong>ಚಿಕ್ಕಮಗಳೂರು ಮಸೀದಿಯಲ್ಲಿ ವಾಸ:</strong></p><p>‘ಕೇರಳದಿಂದ ಚಿಕ್ಕಮಗಳೂರಿಗೆ ಬಂದಿದ್ದ ಈತ, ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ. ಮಸೀದಿ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ. ಈತನ ಇರುವಿಕೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಚಿಕ್ಕಮಗಳೂರಿಗೆ ಹೋಗಿದ್ದ ವಿಶೇಷ ತಂಡ, ಹಲವು ದಿನಗಳವರೆಗೆ ಆರೋಪಿ ಮೇಲೆ ನಿಗಾ ವಹಿಸಿತ್ತು’ ಎಂದು ಮೂಲಗಳು ಹೇಳಿವೆ.</p>.<p>‘ಮೌಲ್ವಿ ಆಗಿರುವ ವ್ಯಕ್ತಿಯೇ ಸುಬ್ರಮಣಿ ಎಂಬುದಕ್ಕೆ ಕೆಲ ಸುಳಿವುಗಳು ಸಿಕ್ಕಿದ್ದವು. ಸ್ಥಳೀಯ ಪೊಲೀಸರ ನೆರವಿನಿಂದ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>