<p><strong>ಬೆಂಗಳೂರು</strong>: ಹೆಬ್ಬಾಳ ಜಂಕ್ಷನ್ ಬಳಿ ನಿರ್ಮಿಸುತ್ತಿದ್ದ ಹೊಸ ಲೂಪ್ (ಪಥ) ಕಾಮಗಾರಿ ಮುಕ್ತಾಯವಾಗಿದ್ದು, ಶನಿವಾರ ರಾತ್ರಿಯಿಂದಲೇ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಹೊಸ ಲೂಪ್ ವಿಮಾನ ನಿಲ್ದಾಣ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಮೂಲಕ ನಗರ ಪ್ರವೇಶಿಸಲು ನೆರವಾಗಲಿದೆ. ಯಲಹಂಕ, ಜಕ್ಕೂರು, ಸಹಕಾರ ನಗರ ಕಡೆಯಿಂದ ಮೇಖ್ರಿ ಸರ್ಕಲ್ವರೆಗೆ ತಡೆರಹಿತವಾಗಿ ಸಂಚರಿಸಬಹುದಾಗಿದೆ.</p>.<p>‘ನಾಗವಾರ– ಕೆ.ಆರ್. ಪುರ ಕಡೆಯಿಂದ ಬರುವ ವಾಹನಗಳಿಗೆ ಪ್ರತೇಕವಾದ ಲೂಪ್ ಇದೆ. ಈಗ ವಿಮಾನ ನಿಲ್ದಾಣದಿಂದ ಮೇಖ್ರಿ ಸರ್ಕಲ್ ಕಡೆಗೆ ಬರುವ ವಾಹನಗಳಿಗೂ ಪಥ ನಿರ್ಮಿಸಿದ್ದು, ಇದರಿಂದ ಸಂಚಾರ ದಟ್ಟಣೆ ಕಡಿಮೆ ಆಗುವ ನಿರೀಕ್ಷೆ ಇದೆ’ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ. </p>.<p>‘ಹೊಸ ಪಥದ ಕಾಮಗಾರಿ ಪೂರ್ಣಗೊಂಡಿದ್ದು, ಸುರಕ್ಷತಾ ಪರಿಶೀಲನೆ ಕಾರ್ಯವೂ ಮುಗಿದಿದೆ. ಪ್ರಾಯೋಗಿಕವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಲಾಗಿದೆ’ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೆಬ್ಬಾಳ ಜಂಕ್ಷನ್ ಬಳಿ ನಿರ್ಮಿಸುತ್ತಿದ್ದ ಹೊಸ ಲೂಪ್ (ಪಥ) ಕಾಮಗಾರಿ ಮುಕ್ತಾಯವಾಗಿದ್ದು, ಶನಿವಾರ ರಾತ್ರಿಯಿಂದಲೇ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಹೊಸ ಲೂಪ್ ವಿಮಾನ ನಿಲ್ದಾಣ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಮೂಲಕ ನಗರ ಪ್ರವೇಶಿಸಲು ನೆರವಾಗಲಿದೆ. ಯಲಹಂಕ, ಜಕ್ಕೂರು, ಸಹಕಾರ ನಗರ ಕಡೆಯಿಂದ ಮೇಖ್ರಿ ಸರ್ಕಲ್ವರೆಗೆ ತಡೆರಹಿತವಾಗಿ ಸಂಚರಿಸಬಹುದಾಗಿದೆ.</p>.<p>‘ನಾಗವಾರ– ಕೆ.ಆರ್. ಪುರ ಕಡೆಯಿಂದ ಬರುವ ವಾಹನಗಳಿಗೆ ಪ್ರತೇಕವಾದ ಲೂಪ್ ಇದೆ. ಈಗ ವಿಮಾನ ನಿಲ್ದಾಣದಿಂದ ಮೇಖ್ರಿ ಸರ್ಕಲ್ ಕಡೆಗೆ ಬರುವ ವಾಹನಗಳಿಗೂ ಪಥ ನಿರ್ಮಿಸಿದ್ದು, ಇದರಿಂದ ಸಂಚಾರ ದಟ್ಟಣೆ ಕಡಿಮೆ ಆಗುವ ನಿರೀಕ್ಷೆ ಇದೆ’ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ. </p>.<p>‘ಹೊಸ ಪಥದ ಕಾಮಗಾರಿ ಪೂರ್ಣಗೊಂಡಿದ್ದು, ಸುರಕ್ಷತಾ ಪರಿಶೀಲನೆ ಕಾರ್ಯವೂ ಮುಗಿದಿದೆ. ಪ್ರಾಯೋಗಿಕವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಲಾಗಿದೆ’ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>