ಬೆಂಗಳೂರು: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ತ್ರಿಬಲ್ ರೈಡಿಂಗ್ ಮಾಡದಂತೆ ಕುಟುಂಬದ ಸದಸ್ಯರು ಸೂಚಿಸಬೇಕು ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
'ಕೊರೊನಾ ಇರುವುದರಿಂದ ಸಂಚಾರ ನಿಯಮಗಳು ಕೊಂಚ ಸಡಿಲವಾಗಿರುವ ಬೆನ್ನಲ್ಲೇ ನಗರದಲ್ಲಿ ದ್ವಿಚಕ್ರ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿವೆ. ಹೆಲ್ಮೆಟ್ ರಹಿತ ಸವಾರಿಯಿಂದ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ, ಸಾವು ಸಂಭವಿಸಿದರೆ ಕುಟುಂಬಸ್ಥರು ಭಾದಿತರಾಗುತ್ತಾರೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.