<p>ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ನೇತೃತ್ವದ ವನ್ಯಜೀವಿ ಮಂಡಳಿಯು ಅನುಮೋದನೆ ನೀಡಿದೆ. ಸಚಿವ ಸಂಪುಟದಲ್ಲಿ ಒಪ್ಪಿಗೆ ಬಾಕಿ ಇದೆ. ದೇಶದಲ್ಲಿನ ಬೇರೆ ಯಾವುದೇ ಮಹಾನಗರದಲ್ಲಿ ಬೆಂಗಳೂರಿನಲ್ಲಿರುವಂತೆ ಈ ರೀತಿಯ ಹುಲ್ಲುಗಾವಲು ಪ್ರದೇಶ ಇಲ್ಲ. ನಗರಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ನಂತರ, ಶುದ್ಧಗಾಳಿ ಪೂರೈಸುವ ಎರಡನೇ ಅತಿ ದೊಡ್ಡ ಪ್ರದೇಶವಿದು. ಇಂತಹ ಪ್ರದೇಶದ ಉಳಿವು ಬೆಂಗಳೂರಿಗೆ ಎಷ್ಟು ಮುಖ್ಯ ಎಂಬುದರ ಕುರಿತ ವಿಸ್ತೃತ ವಿವರ ಈ ವಿಡಿಯೊದಲ್ಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>