ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ಹೇಳಿದ್ದಕ್ಕೆ ನಿಂದಿಸಿದರು

Last Updated 10 ನವೆಂಬರ್ 2019, 19:40 IST
ಅಕ್ಷರ ಗಾತ್ರ

ಹೆಸರಘಟ್ಟ: ಸಮಸ್ಯೆ ಹೇಳಿಕೊಂಡ ಗ್ರಾಮಸ್ಥರನ್ನು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ನಿಂದಿಸಿದ ಘಟನೆ ಚಿಕ್ಕಬಾಣಾವರ ಗ್ರಾಮಸಭೆಯಲ್ಲಿ ನಡೆಯಿತು. ಈ ವೇಳೆ, ಮಾಧ್ಯಮದವರ ಮೇಲೂ ದೌರ್ಜನ್ಯ ನಡೆಸಿದರು.

‘ಮಳೆ ಬಂದರೆ ರಾಜಕಾಲುವೆ ತುಂಬಿ ಮನೆಗಳಿಗೆ ನೀರು ನುಗ್ಗುತ್ತದೆ. ಓಟು ಕೇಳಲು ಮಾತ್ರ ನೀವು ಬರುತ್ತೀರ. ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಕಳೆದ ಹತ್ತು ವರ್ಷಗಳಿಂದ ನಮ್ಮ ಗೋಳು ಕೇಳುವವರಿಲ್ಲ. ರಾಜಕಾಲುವೆಯನ್ನು ಅಳತೆ ಮಾಡಿ ತಡೆಗೋಡೆ ನಿರ್ಮಾಣ ಮಾಡಿ’ ಎಂದು ಮಹಿಳೆಯೊಬ್ಬರು ಮನವಿ ಮಾಡಿಕೊಂಡರು.

ಬಿಜೆಪಿ ಬೆಂಬಲಿತ ಪಂಚಾಯಿತಿ ಸದಸ್ಯರೊಬ್ಬರು, ‘ಇರಮ್ಮ ಸಾಕು, ರಾಜಕಾಲುವೆ ಬಳಿ ಮನೆ ಯಾಕೆ ಕಟ್ಟಿಕೊಂಡೆ’ ಎಂದು ಮಹಿಳೆಯನ್ನು ನಿಂದಿಸಿದರು. ಇದನ್ನು ಚಿತ್ರೀಕರಿಸಲು ಮುಂದಾದ ಮಾಧ್ಯಮದವರ ಮೇಲೆ ಏಕಾಏಕಿ ಹಲ್ಲೆ ನಡೆಸಲು ಮುಂದಾದರು. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.

ಸಭೆ ಹತೋಟಿಗೆ ಬಂದ ಬಳಿಕ ದಾಸರಹಳ್ಳಿ ಶಾಸಕ ಆರ್. ಮಂಜುನಾಥ್, ‘ಮಾಧ್ಯಮದವರ ಮೇಲೆ ಹಲ್ಲೆಗೆ ಮುಂದಾಗಿದ್ದು ಖಂಡನೀಯ. ಸದಸ್ಯರ ಪರವಾಗಿ ಕ್ಷಮೆ ಕೇಳುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT