<p><strong>ಹೆಸರಘಟ್ಟ</strong>: ದಾಸನಪುರ ಹೋಬಳಿ ಬೊಮ್ಮಶೆಟ್ಟಿಹಳ್ಳಿ ಗ್ರಾಮದಲ್ಲಿರುವ ಸಿ.ಎನ್.ಅರ್. ಸಂಸ್ಥೆಯು ಉಚಿತ ಆಂಬುಲೆನ್ಸ್ ಸೇವೆಯನ್ನು ಭಾನುವಾರದಿಂದ ಆರಂಭಿಸಿತು. ಇದೇ ವೇಳೆ, ಕೊರೊನಾ ಸೋಂಕು ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು.</p>.<p>‘ದಾಸನಪುರ,ನೆಲಮಂಗಲ, ಹೆಸರಘಟ್ಟ ಹೋಬಳಿಗಳಲ್ಲಿ ಉಚಿತ ಆಂಬುಲೆನ್ಸ್ ಸೇವೆಯನ್ನು ಪ್ರಾರಂಭ ಮಾಡಲಾಗಿದೆ. ದೂರವಾಣಿ ಕರೆ ಮಾಡಿದರೆ (8660182095) ಆಂಬುಲೆನ್ಸ್ ಸೇವೆ ದೊರೆಯಲಿದೆ. ಬೆಂಗಳೂರಿನ ಯಾವುದೇ ಆಸ್ಪತ್ರೆಗೆ ರೋಗಿಯನ್ನು ಕರೆದು ಕೊಂಡು ಹೋಗಲು ನಮ್ಮ ವಾಹನವನ್ನು ಬಳಸಬಹುದಾಗಿದೆ. ಇದಕ್ಕಾಗಿ ಗ್ರಾಮಸ್ಥರು ಯಾವುದೇ ಹಣವನ್ನು ಪಾವತಿ ಮಾಡಬೇಕಾಗಿಲ್ಲ’ ಎಂದು ಸಂಸ್ಥೆಯ ಅಧ್ಯಕ್ಷರಾದ ವಿ.ರಾಮಸ್ವಾಮಿ ಅವರು ತಿಳಿಸಿದರು.</p>.<p>ಗ್ರಾಮಕ್ಕೆ ಹೊರ ರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರು, ನಿರ್ಗತಿಕರು ಸೇರಿದಂತೆ 164 ಜನ ಸ್ವಯಂ ಪ್ರೇರಣೆಯಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.</p>.<p>‘ಕೊರೊನಾ ಸೊಂಕು ಯಾರಲ್ಲಿಯೂ ಕಂಡು ಬಂದಿಲ್ಲ ಶಿಬಿರದ ಮುಖ್ಯ ವೈದ್ಯರಾದ ಡಾ.ವಿನಯ್ ಕುಮಾರ್ ತಿಳಿಸಿದರು.</p>.<p>ತಪಾಸಣೆ ಶಿಬಿರಕ್ಕೆ ಬಂದ ಶಿಬಿರಾರ್ಥಿಗಳಿಗೆ ರಕ್ಷಾ ಎಜುಕೇಷನ್ ಅಗ್ರಿಕಲ್ಚರ್ ಮೆಡಿಕಲ್ ಚಾರಿಟಬಲ್ ಟ್ರಸ್ಟ್ನವರು ಉಚಿತ ದಿನಸಿ ಪದಾರ್ಥಗಳ ಕಿಟ್ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ</strong>: ದಾಸನಪುರ ಹೋಬಳಿ ಬೊಮ್ಮಶೆಟ್ಟಿಹಳ್ಳಿ ಗ್ರಾಮದಲ್ಲಿರುವ ಸಿ.ಎನ್.ಅರ್. ಸಂಸ್ಥೆಯು ಉಚಿತ ಆಂಬುಲೆನ್ಸ್ ಸೇವೆಯನ್ನು ಭಾನುವಾರದಿಂದ ಆರಂಭಿಸಿತು. ಇದೇ ವೇಳೆ, ಕೊರೊನಾ ಸೋಂಕು ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು.</p>.<p>‘ದಾಸನಪುರ,ನೆಲಮಂಗಲ, ಹೆಸರಘಟ್ಟ ಹೋಬಳಿಗಳಲ್ಲಿ ಉಚಿತ ಆಂಬುಲೆನ್ಸ್ ಸೇವೆಯನ್ನು ಪ್ರಾರಂಭ ಮಾಡಲಾಗಿದೆ. ದೂರವಾಣಿ ಕರೆ ಮಾಡಿದರೆ (8660182095) ಆಂಬುಲೆನ್ಸ್ ಸೇವೆ ದೊರೆಯಲಿದೆ. ಬೆಂಗಳೂರಿನ ಯಾವುದೇ ಆಸ್ಪತ್ರೆಗೆ ರೋಗಿಯನ್ನು ಕರೆದು ಕೊಂಡು ಹೋಗಲು ನಮ್ಮ ವಾಹನವನ್ನು ಬಳಸಬಹುದಾಗಿದೆ. ಇದಕ್ಕಾಗಿ ಗ್ರಾಮಸ್ಥರು ಯಾವುದೇ ಹಣವನ್ನು ಪಾವತಿ ಮಾಡಬೇಕಾಗಿಲ್ಲ’ ಎಂದು ಸಂಸ್ಥೆಯ ಅಧ್ಯಕ್ಷರಾದ ವಿ.ರಾಮಸ್ವಾಮಿ ಅವರು ತಿಳಿಸಿದರು.</p>.<p>ಗ್ರಾಮಕ್ಕೆ ಹೊರ ರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರು, ನಿರ್ಗತಿಕರು ಸೇರಿದಂತೆ 164 ಜನ ಸ್ವಯಂ ಪ್ರೇರಣೆಯಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.</p>.<p>‘ಕೊರೊನಾ ಸೊಂಕು ಯಾರಲ್ಲಿಯೂ ಕಂಡು ಬಂದಿಲ್ಲ ಶಿಬಿರದ ಮುಖ್ಯ ವೈದ್ಯರಾದ ಡಾ.ವಿನಯ್ ಕುಮಾರ್ ತಿಳಿಸಿದರು.</p>.<p>ತಪಾಸಣೆ ಶಿಬಿರಕ್ಕೆ ಬಂದ ಶಿಬಿರಾರ್ಥಿಗಳಿಗೆ ರಕ್ಷಾ ಎಜುಕೇಷನ್ ಅಗ್ರಿಕಲ್ಚರ್ ಮೆಡಿಕಲ್ ಚಾರಿಟಬಲ್ ಟ್ರಸ್ಟ್ನವರು ಉಚಿತ ದಿನಸಿ ಪದಾರ್ಥಗಳ ಕಿಟ್ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>