‘ಪ್ರತಿದಿನ 500ರಿಂದ 600 ವರ್ತಕರು ಮತ್ತು ವ್ಯಾಪಾರಸ್ಥರು ಒಂದು ಕಡೆ ಸೇರುತ್ತಿದ್ದಾರೆ. ಆದರೆ, ಕೊರೊನಾ ವೈರಸ್ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈ ಗೊಳ್ಳುತ್ತಿಲ್ಲ. ಇದರಿಂದ ಸುತ್ತ ಮುತ್ತಲಿನ ಗ್ರಾಮಸ್ಥರಲ್ಲಿ ಕೊರೊನಾ ವೈರಸ್ ಬಗ್ಗೆ ಭೀತಿ ಉಂಟಾಗುತ್ತಿದೆ’ ಎಂದು ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು.