ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಸನಪುರ ಎಪಿಎಂಸಿ ವರ್ತಕರಿಂದ ಪ್ರತಿಭಟನೆ

Last Updated 22 ಮಾರ್ಚ್ 2021, 17:26 IST
ಅಕ್ಷರ ಗಾತ್ರ

ಹೆಸರಘಟ್ಟ: ಮಳಿಗೆ ಬಾಡಿಗೆ ನೀಡುವಂತೆ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ದಾಸನಪುರ ಎ.ಪಿ.ಎಂ.ಸಿ. ವರ್ತಕರ ಸಂಘವು ಪ್ರತಿಭಟನೆ ನಡೆಸಿತು.

‘ದಾಸನಪುರ ಎಪಿಎಂಸಿಯನ್ನು ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ₹300 ಕೋಟಿ ಬಂಡವಾಳ ಹಾಕಿ ನಿರ್ಮಿಸಿರುವ ಈ ಎಪಿಎಂಸಿಯಲ್ಲಿ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ’ ಎಂದು ವರ್ತಕರ ಸಂಘದ ಅಧ್ಯಕ್ಷ ಬಿ.ಅರ್.ಶ್ರೀರಾಮ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

‘ಕೋವಿಡ್‌ ಬಿಕ್ಕಟ್ಟಿನ ಕಾಋಣ ಬಾಡಿಗೆ ಮನ್ನಾ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. ಈಗ ಕಟ್ಟಲೇಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಅಧಿಕಾರಿಗಳ ಈ ವರ್ತನೆ ಬೇಸರ ತಂದಿದೆ’ ಎಂದರು.

‘ಯಶವಂತಪುರ ಮತ್ತು ದಾಸನಪುರ ಎರಡು ಕೇಂದ್ರಗಳಲ್ಲಿ ವ್ಯಾಪಾರ ಕೇಂದ್ರವನ್ನು ತೆರೆದಿರುವುದರಿಂದ ದಾಸನಪುರ ಕೇಂದ್ರದಲ್ಲಿ ವ್ಯಾಪಾರ ನಡೆಯುತ್ತಿಲ್ಲ. ಯಾವುದಾದರೂ ಒಂದು ಕೇಂದ್ರದಲ್ಲಿ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದೇವೆ. ಆದರೆ ಯಾವುದೇ ಪ್ರಯೋಜವಾಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT