‘ದಾಸನಪುರ ಎಪಿಎಂಸಿಯನ್ನು ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ₹300 ಕೋಟಿ ಬಂಡವಾಳ ಹಾಕಿ ನಿರ್ಮಿಸಿರುವ ಈ ಎಪಿಎಂಸಿಯಲ್ಲಿ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ’ ಎಂದು ವರ್ತಕರ ಸಂಘದ ಅಧ್ಯಕ್ಷ ಬಿ.ಅರ್.ಶ್ರೀರಾಮ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.