<p><strong>ಹೆಸರಘಟ್ಟ:</strong> ‘ಯಲಹಂಕ ತಾಲ್ಲೂಕಿನಲ್ಲಿ ಹತ್ತು ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಶೇಕಡ 3ರಷ್ಟು ಮನೆಗಳನ್ನು ಅಂಗವಿಕಲರಿಗೆ ಮೀಸಲಿಡಲಾಗುವುದು’ ಎಂದು ಯಲಹಂಕ ಶಾಸಕ ಮತ್ತು ಬಿ.ಡಿ.ಎ.ಅಧ್ಯಕ್ಷರಾದ ಎಸ್.ಅರ್.ವಿಶ್ವನಾಥ್ ತಿಳಿಸಿದರು.</p>.<p>‘ವಾಯ್ಸ್ ಆಫ್ ನೀಡಿ’ ಫೌಂಡೇಷನ್ ತರಬೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್ ವಿತರಿಸಿ ಮಾತನಾಡಿದರು.</p>.<p>‘ಅಂಗವೈಕಲ್ಯ ಎನ್ನುವುದು ಶಾಪವಲ್ಲ. ಪೂರ್ವಜನ್ಮದ ಕರ್ಮವೂ ಅಲ್ಲ. ಅಂಗವೈಕಲ್ಯದ ನಡುವೆಯೂ ಸಾಕಷ್ಟು ಜನ ಅನುಪಮ ಸಾಧನೆಯನ್ನು ಮಾಡಿದ್ದಾರೆ’ ಎಂದರು.</p>.<p>ಹೆಸರಘಟ್ಟ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಬಿ.ಕೃಷ್ಣಯ್ಯ, ‘ಅಂಗವಿಕಲರಿಗಾಗಿ ಅಂಕವಿಕಲರೇ ನಿಂತು ಮಾಡುತ್ತಿರುವ ಕೆಲಸ ಶ್ಲಾಘನೀಯ. ಸರ್ಕಾರದ ಯೋಜನೆಗಳ ಬಗ್ಗೆ ಅಂಗವಿಕಲರು ತಿಳಿದುಕೊಂಡು ಪ್ರಯೋಜನ ಪಡೆದುಕೊಳ್ಳಬೇಕು' ಎಂದು ಹೇಳಿದರು.</p>.<p>ಅಂಗವಿಕಲರಿಗೆ ದಿನಸಿ ಕಿಟ್ಗಳನ್ನು ವಿತರಿಸಲಾಯಿತು.</p>.<p>ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ನಗರ ಉಪಾಧ್ಯಕ್ಷ ವೀಣಾ ರಮೇಶ್, ಬಿಜೆಪಿ ಮುಖಂಡರಾದ ಮನೋಹರ್, ದೇವರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ:</strong> ‘ಯಲಹಂಕ ತಾಲ್ಲೂಕಿನಲ್ಲಿ ಹತ್ತು ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಶೇಕಡ 3ರಷ್ಟು ಮನೆಗಳನ್ನು ಅಂಗವಿಕಲರಿಗೆ ಮೀಸಲಿಡಲಾಗುವುದು’ ಎಂದು ಯಲಹಂಕ ಶಾಸಕ ಮತ್ತು ಬಿ.ಡಿ.ಎ.ಅಧ್ಯಕ್ಷರಾದ ಎಸ್.ಅರ್.ವಿಶ್ವನಾಥ್ ತಿಳಿಸಿದರು.</p>.<p>‘ವಾಯ್ಸ್ ಆಫ್ ನೀಡಿ’ ಫೌಂಡೇಷನ್ ತರಬೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್ ವಿತರಿಸಿ ಮಾತನಾಡಿದರು.</p>.<p>‘ಅಂಗವೈಕಲ್ಯ ಎನ್ನುವುದು ಶಾಪವಲ್ಲ. ಪೂರ್ವಜನ್ಮದ ಕರ್ಮವೂ ಅಲ್ಲ. ಅಂಗವೈಕಲ್ಯದ ನಡುವೆಯೂ ಸಾಕಷ್ಟು ಜನ ಅನುಪಮ ಸಾಧನೆಯನ್ನು ಮಾಡಿದ್ದಾರೆ’ ಎಂದರು.</p>.<p>ಹೆಸರಘಟ್ಟ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಬಿ.ಕೃಷ್ಣಯ್ಯ, ‘ಅಂಗವಿಕಲರಿಗಾಗಿ ಅಂಕವಿಕಲರೇ ನಿಂತು ಮಾಡುತ್ತಿರುವ ಕೆಲಸ ಶ್ಲಾಘನೀಯ. ಸರ್ಕಾರದ ಯೋಜನೆಗಳ ಬಗ್ಗೆ ಅಂಗವಿಕಲರು ತಿಳಿದುಕೊಂಡು ಪ್ರಯೋಜನ ಪಡೆದುಕೊಳ್ಳಬೇಕು' ಎಂದು ಹೇಳಿದರು.</p>.<p>ಅಂಗವಿಕಲರಿಗೆ ದಿನಸಿ ಕಿಟ್ಗಳನ್ನು ವಿತರಿಸಲಾಯಿತು.</p>.<p>ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ನಗರ ಉಪಾಧ್ಯಕ್ಷ ವೀಣಾ ರಮೇಶ್, ಬಿಜೆಪಿ ಮುಖಂಡರಾದ ಮನೋಹರ್, ದೇವರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>