<p>ಹೆಸರಘಟ್ಟ: ದಾಸನಪುರ ಹೋಬಳಿ ತೋಟಗೆರೆ ಗ್ರಾಮದಿಂದ ನೃತ್ಯ ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯ ದುರಸ್ತಿ ಕಾಮಗಾರಿ ವಿಳಂಬವಾಗುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ನಾಲ್ಕು ಕಿ.ಮೀ. ರಸ್ತೆಯನ್ನು ಅಗೆದು ಜಲ್ಲಿ ಹಾಕಿ ಹಾಗೆಯೇ ಬಿಟ್ಟಿರುವುದರಿಂದ ದ್ವಿಚಕ್ರ ವಾಹನಗಳು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಕಷ್ಟ ಅರ್ಥ ಮಾಡಿಕೊಳ್ಳುತ್ತಿಲ್ಲ’ ಎಂದು ಗ್ರಾಮದ ನಿವಾಸಿ ಶಾಂತಣ್ಣ ಬೇಸರ ವ್ಯಕ್ತಪಡಿಸಿದರು.</p>.<p>‘ರಸ್ತೆಯ ಅಕ್ಕಪಕ್ಕದಲ್ಲಿ ಅನೇಕ ನರ್ಸರಿಗಳಿವೆ. ಕೋಳಿ ಸಾಕಾಣಿಕೆ ಕೇಂದ್ರಗಳೂ ಇವೆ. ರೈತರು ತರಕಾರಿಗಳನ್ನು ಮಾರುಕಟ್ಟೆಗೆ ಒಯ್ಯಲು ಇದೇ ರಸ್ತೆಯ ಮೂಲಕ ಸಾಗಬೇಕು. ಈ ಜಲ್ಲಿಯನ್ನು ದಾಟಿಯೇ ದನಕರುಗಳೂ ಮೇಯಲು ಹೋಗಬೇಕು. ಜಲ್ಲಿ ತಾಗಿ ದನಗಳ ಪಾದಕ್ಕೆ ಗಾಯಗಳಾಗುತ್ತಿವೆ’ ಎಂದರು.</p>.<p>‘ಗಾಯದ ನೋವಿನಿಂದ ಹಸುಗಳು ಓಡಾಡುವುದೇ ಕಷ್ಟವಾಗಿದೆ. ಪಶು ವೈದ್ಯಾಧಿಕಾರಿಗಳು ಬಂದು ಚಿಕಿತ್ಸೆ ನೀಡುತ್ತಿದ್ದಾರೆ’ ಎಂದರು.</p>.<p>‘ಗುತ್ತಿಗೆದಾರರು ಬೇಗ ಕೆಲಸ ಪೂರ್ಣಗೊಳಿಸುತ್ತಿಲ್ಲ. ಮನಸ್ಸಿಗೆ ಬಂದಂತೆ ಅವರು ಕೆಲಸ ಮಾಡುತ್ತಿದ್ದಾರೆ’ ಎಂದು ಗ್ರಾಮದ ನಿವಾಸಿ ಹರೀಶ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಲೋಕೋಪಯೋಗಿ ಇಲಾಖೆಯ ದಾಸನಪುರ ವಿಭಾಗದ ಎಂಜಿನಿಯರ್ ಮಂಜುನಾಥ, ‘ಶೀಘ್ರದಲ್ಲಿಯೇ ರಸ್ತೆಗೆ ಡಾಂಬರು ಹಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆಸರಘಟ್ಟ: ದಾಸನಪುರ ಹೋಬಳಿ ತೋಟಗೆರೆ ಗ್ರಾಮದಿಂದ ನೃತ್ಯ ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯ ದುರಸ್ತಿ ಕಾಮಗಾರಿ ವಿಳಂಬವಾಗುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ನಾಲ್ಕು ಕಿ.ಮೀ. ರಸ್ತೆಯನ್ನು ಅಗೆದು ಜಲ್ಲಿ ಹಾಕಿ ಹಾಗೆಯೇ ಬಿಟ್ಟಿರುವುದರಿಂದ ದ್ವಿಚಕ್ರ ವಾಹನಗಳು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಕಷ್ಟ ಅರ್ಥ ಮಾಡಿಕೊಳ್ಳುತ್ತಿಲ್ಲ’ ಎಂದು ಗ್ರಾಮದ ನಿವಾಸಿ ಶಾಂತಣ್ಣ ಬೇಸರ ವ್ಯಕ್ತಪಡಿಸಿದರು.</p>.<p>‘ರಸ್ತೆಯ ಅಕ್ಕಪಕ್ಕದಲ್ಲಿ ಅನೇಕ ನರ್ಸರಿಗಳಿವೆ. ಕೋಳಿ ಸಾಕಾಣಿಕೆ ಕೇಂದ್ರಗಳೂ ಇವೆ. ರೈತರು ತರಕಾರಿಗಳನ್ನು ಮಾರುಕಟ್ಟೆಗೆ ಒಯ್ಯಲು ಇದೇ ರಸ್ತೆಯ ಮೂಲಕ ಸಾಗಬೇಕು. ಈ ಜಲ್ಲಿಯನ್ನು ದಾಟಿಯೇ ದನಕರುಗಳೂ ಮೇಯಲು ಹೋಗಬೇಕು. ಜಲ್ಲಿ ತಾಗಿ ದನಗಳ ಪಾದಕ್ಕೆ ಗಾಯಗಳಾಗುತ್ತಿವೆ’ ಎಂದರು.</p>.<p>‘ಗಾಯದ ನೋವಿನಿಂದ ಹಸುಗಳು ಓಡಾಡುವುದೇ ಕಷ್ಟವಾಗಿದೆ. ಪಶು ವೈದ್ಯಾಧಿಕಾರಿಗಳು ಬಂದು ಚಿಕಿತ್ಸೆ ನೀಡುತ್ತಿದ್ದಾರೆ’ ಎಂದರು.</p>.<p>‘ಗುತ್ತಿಗೆದಾರರು ಬೇಗ ಕೆಲಸ ಪೂರ್ಣಗೊಳಿಸುತ್ತಿಲ್ಲ. ಮನಸ್ಸಿಗೆ ಬಂದಂತೆ ಅವರು ಕೆಲಸ ಮಾಡುತ್ತಿದ್ದಾರೆ’ ಎಂದು ಗ್ರಾಮದ ನಿವಾಸಿ ಹರೀಶ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಲೋಕೋಪಯೋಗಿ ಇಲಾಖೆಯ ದಾಸನಪುರ ವಿಭಾಗದ ಎಂಜಿನಿಯರ್ ಮಂಜುನಾಥ, ‘ಶೀಘ್ರದಲ್ಲಿಯೇ ರಸ್ತೆಗೆ ಡಾಂಬರು ಹಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>