<p><strong>ಹೆಸರಘಟ್ಟ: </strong>ಕಸಘಟ್ಟಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಲಕೆರೆ ಗ್ರಾಮದಲ್ಲಿ ಜಲಶಕ್ತಿ ಅಭಿಯಾನಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ ಚಾಲನೆ ನೀಡಿದರು.</p>.<p>‘ನಮ್ಮೂರ ಕೆರೆಗಳ ಹೂಳು ತೆಗೆದು ರಾಜಕಾಲುವೆ ಸ್ವಚ್ಚ ಮಾಡಿ ನೀರು ಸಂಗ್ರಹವಾಗುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಜಲಶಕ್ತಿ ಕಾರ್ಯಕ್ರಮವನ್ನು ರೂಪಿಸಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ ದೊಡ್ಡ ಬ್ಯಾಲಕೆರೆ ಗ್ರಾಮದ ಕೆರೆಯ ಹೂಳು ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರು ಪಕ್ಷಭೇದ ಮರೆತು ಕೈ ಜೋಡಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ನಗರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳ ದಡದಲ್ಲಿ ಗಿಡಗಳನ್ನು ನೆಡಲಾಗುವುದು.ಈಗಾಗಲೇ ಐವತ್ತು ಸಾವಿರ ಸಸಿಗಳನ್ನು ಕೊಡುವುದಕ್ಕೆ ಒಂದು ಸಂಸ್ಥೆ ಮುಂದೆ ಬಂದಿದೆ. ಆ ಗಿಡಗಳನ್ನು ಗ್ರಾಮ ಪಂಚಾಯಿತಿಗಳಿಗೆ ವಿತರಿಸಲಾಗುವುದು’ ಎಂದರು.</p>.<p>‘ಕೆರೆಗಳ ಹೂಳು ತೆಗೆದು ಕೆರೆಯನ್ನು ಅಚ್ಚುಕಟ್ಟಾಗಿ ಅಭಿವೃದ್ದಿ ಪಡಿಸಿದವರಿಗೆ ಮೊದಲ ಬಹುಮಾನವಾಗಿ ₹50 ಸಾವಿರ, ದ್ವೀತಿಯ ಬಹುಮಾನವಾಗಿ ₹25 ಸಾವಿರ, ತೃತೀಯ ಬಹುಮಾನವಾಗಿ ₹15 ಸಾವಿರ ನೀಡಲಾಗುವುದು’ ಎಂದರು.</p>.<p>ಉಪಕಾರ್ಯದರ್ಶಿ ಡಾ.ಸಿ. ಸಿದ್ದರಾಮಯ್ಯ, ‘ನರೇಗಾ ಯೋಜನೆಯಡಿ ಕೆರೆಗಳನ್ನು ನೂರು ದಿನಗಳಲ್ಲಿ ಅಭಿವೃದ್ದಿ ಪಡಿಸಲಾಗುವುದು. ಗ್ರಾಮದಲ್ಲಿರುವರಿಗೆ ನೂರು ದಿನಕ್ಕೆ ಸುಮಾರು ₹28 ಸಾವಿರದಷ್ಟು ಸಂಬಳ ಸಿಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ಕಸಘಟ್ಟಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಲಕೆರೆ ಗ್ರಾಮದಲ್ಲಿ ಜಲಶಕ್ತಿ ಅಭಿಯಾನಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ ಚಾಲನೆ ನೀಡಿದರು.</p>.<p>‘ನಮ್ಮೂರ ಕೆರೆಗಳ ಹೂಳು ತೆಗೆದು ರಾಜಕಾಲುವೆ ಸ್ವಚ್ಚ ಮಾಡಿ ನೀರು ಸಂಗ್ರಹವಾಗುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಜಲಶಕ್ತಿ ಕಾರ್ಯಕ್ರಮವನ್ನು ರೂಪಿಸಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ ದೊಡ್ಡ ಬ್ಯಾಲಕೆರೆ ಗ್ರಾಮದ ಕೆರೆಯ ಹೂಳು ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರು ಪಕ್ಷಭೇದ ಮರೆತು ಕೈ ಜೋಡಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ನಗರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳ ದಡದಲ್ಲಿ ಗಿಡಗಳನ್ನು ನೆಡಲಾಗುವುದು.ಈಗಾಗಲೇ ಐವತ್ತು ಸಾವಿರ ಸಸಿಗಳನ್ನು ಕೊಡುವುದಕ್ಕೆ ಒಂದು ಸಂಸ್ಥೆ ಮುಂದೆ ಬಂದಿದೆ. ಆ ಗಿಡಗಳನ್ನು ಗ್ರಾಮ ಪಂಚಾಯಿತಿಗಳಿಗೆ ವಿತರಿಸಲಾಗುವುದು’ ಎಂದರು.</p>.<p>‘ಕೆರೆಗಳ ಹೂಳು ತೆಗೆದು ಕೆರೆಯನ್ನು ಅಚ್ಚುಕಟ್ಟಾಗಿ ಅಭಿವೃದ್ದಿ ಪಡಿಸಿದವರಿಗೆ ಮೊದಲ ಬಹುಮಾನವಾಗಿ ₹50 ಸಾವಿರ, ದ್ವೀತಿಯ ಬಹುಮಾನವಾಗಿ ₹25 ಸಾವಿರ, ತೃತೀಯ ಬಹುಮಾನವಾಗಿ ₹15 ಸಾವಿರ ನೀಡಲಾಗುವುದು’ ಎಂದರು.</p>.<p>ಉಪಕಾರ್ಯದರ್ಶಿ ಡಾ.ಸಿ. ಸಿದ್ದರಾಮಯ್ಯ, ‘ನರೇಗಾ ಯೋಜನೆಯಡಿ ಕೆರೆಗಳನ್ನು ನೂರು ದಿನಗಳಲ್ಲಿ ಅಭಿವೃದ್ದಿ ಪಡಿಸಲಾಗುವುದು. ಗ್ರಾಮದಲ್ಲಿರುವರಿಗೆ ನೂರು ದಿನಕ್ಕೆ ಸುಮಾರು ₹28 ಸಾವಿರದಷ್ಟು ಸಂಬಳ ಸಿಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>