ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ‘ಬಾಂಬ್’ ನಗರದಾದ್ಯಂತ ಕಟ್ಟೆಚ್ಚರ

Last Updated 20 ಜನವರಿ 2020, 22:32 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣ ಈಗಾಗಲೇ ಹೆಚ್ಚಿನ ಭದ್ರತಾ ವ್ಯಾಪ್ತಿಯಲ್ಲಿದೆ. ಇಲ್ಲಿ ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ನಿಲ್ದಾಣದ ಪ್ರವೇಶ ಸ್ಥಳದಲ್ಲೇ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಟರ್ಮಿನಲ್‌ಗೆ ಪ್ರವೇಶ ಸೇರಿದಂತೆ ಎಲ್ಲ ಕಡೆ ಭದ್ರತೆ ಇದೆ. ವಿಮಾನ ನಿಲ್ದಾಣದ ಆವರಣದಲ್ಲಿ ಸ್ಥಳೀಯ ಪೊಲೀಸರು ವಿಶೇಷ ನಿಗಾ ವಹಿಸುತ್ತಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದರು.

‘ಹೆಚ್ಚಿನ ಭದ್ರತೆ ಹಾಗೂ ತೀವ್ರ ನಿಗಾ ವಹಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಡಾ. ಅಮರ್ ಕುಮಾರ್‌ಪಾಂಡೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT