<p><strong>ಬೆಂಗಳೂರು:</strong> ಎಫ್ಐಆರ್(ಪ್ರಥಮ ವರ್ತಮಾನ ವರದಿ) ಎಂದರೆ ವಿಶ್ವಕೋಶವಾಗಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕೊಲೆ ಪ್ರಕರಣದ ಆರೋಪಿಯೊಬ್ಬರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ಈ ಅಭಿಪ್ರಾಯಪಟ್ಟಿದೆ.</p>.<p>ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿ ಅರ್ಜುನ್ ಎಂಬವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.</p>.<p>‘ಮೃತರ ಸಹೋದರಿ ನೀಡಿರುವ ಹೇಳಿಕೆಯನ್ನು ನಂಬಬಾರದು, ಏಕೆಂದರೆ ಹಲ್ಲೆ ನಡೆಸಿದವರ ಹೆಸರನ್ನು ಅವರು ಹೇಳಿಲ್ಲ’ ಎಂದು ಅರ್ಜಿದಾರರು ವಾದಿಸಿದರು.</p>.<p>‘ಇಬ್ಬರು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಹೇಳಿಕೆ ನೀಡಿಲ್ಲ. ನನ್ನ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಾಗಿ ಜಾಮೀನು ನೀಡಬೇಕು’ ಎಂದು ಕೋರಿದರು.</p>.<p>ವಿಚಾರಣೆ ನಡೆಸಿ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ಕುಮಾರ್, ‘ಎಫ್ಐಆರ್ ನಂಬದಿರಲು ಯಾವುದೇ ಆಧಾರ ಇಲ್ಲ. ಪ್ರಕರಣದ ಕುರಿತ ಎಲ್ಲ ಮಾಹಿತಿಯನ್ನೂ ಎಫ್ಐಆರ್ ಒಳಗೊಂಡಿರಬೇಕಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ವಿಚಾರಣೆ ನಡೆಸಲು ಇನ್ನೂ ಅವಕಾಶ ಇದೆ’ ಎಂದು ತಿಳಿಸಿ ಜಾಮೀನು ಅರ್ಜಿ ತಿರಸ್ಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಫ್ಐಆರ್(ಪ್ರಥಮ ವರ್ತಮಾನ ವರದಿ) ಎಂದರೆ ವಿಶ್ವಕೋಶವಾಗಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕೊಲೆ ಪ್ರಕರಣದ ಆರೋಪಿಯೊಬ್ಬರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ಈ ಅಭಿಪ್ರಾಯಪಟ್ಟಿದೆ.</p>.<p>ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿ ಅರ್ಜುನ್ ಎಂಬವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.</p>.<p>‘ಮೃತರ ಸಹೋದರಿ ನೀಡಿರುವ ಹೇಳಿಕೆಯನ್ನು ನಂಬಬಾರದು, ಏಕೆಂದರೆ ಹಲ್ಲೆ ನಡೆಸಿದವರ ಹೆಸರನ್ನು ಅವರು ಹೇಳಿಲ್ಲ’ ಎಂದು ಅರ್ಜಿದಾರರು ವಾದಿಸಿದರು.</p>.<p>‘ಇಬ್ಬರು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಹೇಳಿಕೆ ನೀಡಿಲ್ಲ. ನನ್ನ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಾಗಿ ಜಾಮೀನು ನೀಡಬೇಕು’ ಎಂದು ಕೋರಿದರು.</p>.<p>ವಿಚಾರಣೆ ನಡೆಸಿ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ಕುಮಾರ್, ‘ಎಫ್ಐಆರ್ ನಂಬದಿರಲು ಯಾವುದೇ ಆಧಾರ ಇಲ್ಲ. ಪ್ರಕರಣದ ಕುರಿತ ಎಲ್ಲ ಮಾಹಿತಿಯನ್ನೂ ಎಫ್ಐಆರ್ ಒಳಗೊಂಡಿರಬೇಕಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ವಿಚಾರಣೆ ನಡೆಸಲು ಇನ್ನೂ ಅವಕಾಶ ಇದೆ’ ಎಂದು ತಿಳಿಸಿ ಜಾಮೀನು ಅರ್ಜಿ ತಿರಸ್ಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>