<p><strong>ಬೆಂಗಳೂರು:</strong> ‘ಮುಂಬೈನ ಜೈಲುಗಳ ಸ್ಥಿತಿ ಗಮನಿಸಿದರೆ ಕರ್ನಾಟಕದ ಜೈಲುಗಳ ಸ್ಥಿತಿ ಉತ್ತಮವಾಗಿದೆ’ ಎಂದು ರಾಜ್ಯ ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಜೈಲುಗಳಲ್ಲಿನ ಅಸಹಜ ಸಾವು ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ರಾಜ್ಯದ ಜೈಲುಗಳ ಸ್ಥಿತಿಗತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಓಕಾ ಅವರು, ‘ರಾಜ್ಯದಾದ್ಯಂತ, ಜೈಲುಗಳಲ್ಲಿ 2017ರ ನವೆಂಬರ್ 1ರಿಂದ 2019ರ ಮಾರ್ಚ್ 31ರವರೆಗೆ ಎಷ್ಟು ಅಸಹಜ ಸಾವಿನ ಪ್ರಕರಣ ನಡೆದಿವೆ ಮತ್ತು ಅವರ<br />ಸಂಬಂಧಿಕರಿಗೆ ತಾತ್ಕಾಲಿಕವಾಗಿ ಎಷ್ಟು ಪರಿಹಾರ ನೀಡಿದ್ದೀರಿ ಎಂಬ ಬಗ್ಗೆ ಒಂದು ತಿಂಗಳಲ್ಲಿ ಮಾಹಿತಿ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದರು.</p>.<p><strong>ಮತ್ತೊಂದು ಪ್ರಕರಣ:</strong> ‘ಮಾನಸಿಕ ಕಾಯಿಲೆ ಕಾಯ್ದೆ-2017ರ ಪ್ರಕಾರ ಕೈದಿಗಳಿಗೆ ಒದಗಿಸಲಾಗುತ್ತಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ಸಲ್ಲಿಸಲಾಗಿರುವ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ನ್ಯಾಯಪೀಠ ಇದೇ ವೇಳೆ ವಿಚಾರಣೆ ನಡೆಸಿತು.</p>.<p>ಸರ್ಕಾರದ ಪರ ವಕೀಲರು, ‘ರಾಜ್ಯದ 9 ಕೇಂದ್ರ ಕಾರಾಗೃಹ ಹಾಗೂ 22 ಜಿಲ್ಲಾ ಕಾರಾಗೃಹಗಳಲ್ಲಿ 562 ಕೈದಿಗಳ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಕೊಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಪ್ರತಿಯೊಂದು ಜೈಲಿನಲ್ಲಿಯೂ ಮನೋರೋಗಿಗಳಿಗೆ ಪ್ರತ್ಯೇಕ ವಾರ್ಡ್ ಸ್ಥಾಪನೆ ಮತ್ತು ಮಾನಸಿಕ ಕಾಯಿಲೆ ನಿರ್ವಹಣಾ ಮಂಡಳಿ ರಚನೆ ಮಾಡುವ ದಿಸೆಯಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ಮಾಹಿತಿ ನೀಡಿ’ ಎಂದು ಸೂಚಿಸಿತು. ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಂಬೈನ ಜೈಲುಗಳ ಸ್ಥಿತಿ ಗಮನಿಸಿದರೆ ಕರ್ನಾಟಕದ ಜೈಲುಗಳ ಸ್ಥಿತಿ ಉತ್ತಮವಾಗಿದೆ’ ಎಂದು ರಾಜ್ಯ ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಜೈಲುಗಳಲ್ಲಿನ ಅಸಹಜ ಸಾವು ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ರಾಜ್ಯದ ಜೈಲುಗಳ ಸ್ಥಿತಿಗತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಓಕಾ ಅವರು, ‘ರಾಜ್ಯದಾದ್ಯಂತ, ಜೈಲುಗಳಲ್ಲಿ 2017ರ ನವೆಂಬರ್ 1ರಿಂದ 2019ರ ಮಾರ್ಚ್ 31ರವರೆಗೆ ಎಷ್ಟು ಅಸಹಜ ಸಾವಿನ ಪ್ರಕರಣ ನಡೆದಿವೆ ಮತ್ತು ಅವರ<br />ಸಂಬಂಧಿಕರಿಗೆ ತಾತ್ಕಾಲಿಕವಾಗಿ ಎಷ್ಟು ಪರಿಹಾರ ನೀಡಿದ್ದೀರಿ ಎಂಬ ಬಗ್ಗೆ ಒಂದು ತಿಂಗಳಲ್ಲಿ ಮಾಹಿತಿ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದರು.</p>.<p><strong>ಮತ್ತೊಂದು ಪ್ರಕರಣ:</strong> ‘ಮಾನಸಿಕ ಕಾಯಿಲೆ ಕಾಯ್ದೆ-2017ರ ಪ್ರಕಾರ ಕೈದಿಗಳಿಗೆ ಒದಗಿಸಲಾಗುತ್ತಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ಸಲ್ಲಿಸಲಾಗಿರುವ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ನ್ಯಾಯಪೀಠ ಇದೇ ವೇಳೆ ವಿಚಾರಣೆ ನಡೆಸಿತು.</p>.<p>ಸರ್ಕಾರದ ಪರ ವಕೀಲರು, ‘ರಾಜ್ಯದ 9 ಕೇಂದ್ರ ಕಾರಾಗೃಹ ಹಾಗೂ 22 ಜಿಲ್ಲಾ ಕಾರಾಗೃಹಗಳಲ್ಲಿ 562 ಕೈದಿಗಳ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಕೊಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಪ್ರತಿಯೊಂದು ಜೈಲಿನಲ್ಲಿಯೂ ಮನೋರೋಗಿಗಳಿಗೆ ಪ್ರತ್ಯೇಕ ವಾರ್ಡ್ ಸ್ಥಾಪನೆ ಮತ್ತು ಮಾನಸಿಕ ಕಾಯಿಲೆ ನಿರ್ವಹಣಾ ಮಂಡಳಿ ರಚನೆ ಮಾಡುವ ದಿಸೆಯಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ಮಾಹಿತಿ ನೀಡಿ’ ಎಂದು ಸೂಚಿಸಿತು. ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>