ವಿಚಾರಣೆ ವೇಳೆ ರಾಜ್ಯದ ಜೈಲುಗಳ ಸ್ಥಿತಿಗತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಓಕಾ ಅವರು, ‘ರಾಜ್ಯದಾದ್ಯಂತ, ಜೈಲುಗಳಲ್ಲಿ 2017ರ ನವೆಂಬರ್ 1ರಿಂದ 2019ರ ಮಾರ್ಚ್ 31ರವರೆಗೆ ಎಷ್ಟು ಅಸಹಜ ಸಾವಿನ ಪ್ರಕರಣ ನಡೆದಿವೆ ಮತ್ತು ಅವರ
ಸಂಬಂಧಿಕರಿಗೆ ತಾತ್ಕಾಲಿಕವಾಗಿ ಎಷ್ಟು ಪರಿಹಾರ ನೀಡಿದ್ದೀರಿ ಎಂಬ ಬಗ್ಗೆ ಒಂದು ತಿಂಗಳಲ್ಲಿ ಮಾಹಿತಿ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದರು.