ಬೆಂಗಳೂರು: ಸಮನ್ಸ್ ಜಾರಿಗೊಳಿಸದೆ ಸರ್ಚ್ ವಾರಂಟ್ ಹೊರಡಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಡಿ.ಜೆ.ಹಳ್ಳಿ ಗಲಭೆ ಪ್ರಕಣದಲ್ಲಿ ಕಚೇರಿ ಶೋಧ ನಡೆಸಲು ವಾರಂಟ್ ಹೊರಡಿಸಿದ್ದ ಎನ್ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ‘ಸಿಆರ್ಪಿಸಿಯ ಸೆಕ್ಷನ್ 93 (1) (ಸಿ) ಅಡಿಯಲ್ಲಿ ಸರ್ಚ್ ವಾರಂಟ್ ಹೊರಡಿಸುವ ಮೊದಲು ಸಮನ್ಸ್ ಜಾರಿಗೊಳಿಸಬೇಕು ಎಂಬುದು ಎಲ್ಲಾ ಸಂದರ್ಭಕ್ಕೂ ಅನ್ವಯವಾಗುವುದಿಲ್ಲ’ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಸ್ಪಷ್ಟಪಡಿಸಿದ್ದಾರೆ.