ಬೆಂಗಳೂರು: ಕೋವಿಡ್ ಹೆಚ್ಚುತ್ತಿರುವ ಕಾರಣ ನ್ಯಾಯಾಲಯದಲ್ಲಿ ಸದ್ಯ ಅನುಸರಿಸುತ್ತಿರುವ ಮಾರ್ಗಸೂಚಿಗಳನ್ನು ಮೇ 29ರವರೆಗೆ ಮುಂದುವರಿಸುವಂತೆ ಹೈಕೋರ್ಟ್ ಆದೇಶಿಸಿದೆ.
ನ್ಯಾಯಾಲಯಗಳಲ್ಲಿ ಕಲಾಪಗಳು ಹೇಗೆ ನಡೆಯಬೇಕು ಎಂಬುದರ ಕುರಿತು ಹೊರಡಿಸಿದ್ದ ಮಾರ್ಗಸೂಚಿ ಏಪ್ರಿಲ್ನಲ್ಲಿ ಕೊನೆಗೊಳ್ಳಳಿದ್ದು, ಅದನ್ನು ಮೇ 29ರವರೆಗೆ ವಿಸ್ತರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿತು.
ಯಾವುದೇ ಕಟ್ಟಡಗಳ ತೆರವು ರೀತಿಯ ಆದೇಶಗಳನ್ನು ಮೇ 29ರವರೆಗೆ ತಡೆಹಿಡಿಯಬೇಕು. ಅದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಬರುವವರ ಸಂಖ್ಯೆ ಕಡಿಮೆ ಮಾಡುವುದು ಇದರ ಉದ್ದೇಶ. ಒಂದು ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವ ಜಿಲ್ಲೆಗಳ ನ್ಯಾಯಾಲಯಗಳಲ್ಲೂ ಇದೇ ರೀತಿಯ ನಿರ್ಬಂಧಗಳನ್ನು ಅನುಸರಿಸಬೇಕು ಎಂದು ಪೀಠ ತಿಳಿಸಿತು.