<p><strong>ಬೆಂಗಳೂರು: </strong>ಬಿಬಿಎಂಪಿಯ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅವರು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ 2015ರಲ್ಲಿ ದಾಖಲಿಸಿದ್ದ ದೂರು ಆಧರಿಸಿ ನಡೆಸಿರುವ ತನಿಖೆ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಎನ್.ಆರ್.ರಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>‘ಅಧಿಕಾರಿಯೊಬ್ಬರು ದೂರು ನೀಡಿ ಆರು ವರ್ಷ ಕಳೆದಿದೆ. ಆದರೂ, ಏಕೆ ಕ್ರಮ ಕೈಗೊಂಡಿಲ್ಲ. ತನಿಖೆ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಬೇಕು’ ಎಂದು ಅಮೃತಹಳ್ಳಿ ಪೊಲೀಸರಿಗೆ ನಿರ್ದೇಶನ ನೀಡಿತು.</p>.<p>ರಮೇಶ್ ಸಲ್ಲಿಸಿರುವ ಅರ್ಜಿಯಲ್ಲಿ 5ನೇ ಪ್ರತಿವಾದಿ ಆಗಿರುವ ಪಾಲಿಕೆ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಪರ ವಕೀಲರು, ‘ಎನ್.ಆರ್.ರಮೇಶ್ ವಿರುದ್ಧ 2015ರಲ್ಲೇ ದೂರು ದಾಖಲಿಸಿದ್ದರೂ ಕ್ರಮ ಕೈಗೊಂಡಿಲ್ಲ’ ಎಂದು ಪೀಠದ ಗಮನಕ್ಕೆ ತಂದರು. ವಿಚಾರಣೆಯನ್ನು ಪೀಠ ಜೂ.30ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿಯ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅವರು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ 2015ರಲ್ಲಿ ದಾಖಲಿಸಿದ್ದ ದೂರು ಆಧರಿಸಿ ನಡೆಸಿರುವ ತನಿಖೆ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಎನ್.ಆರ್.ರಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>‘ಅಧಿಕಾರಿಯೊಬ್ಬರು ದೂರು ನೀಡಿ ಆರು ವರ್ಷ ಕಳೆದಿದೆ. ಆದರೂ, ಏಕೆ ಕ್ರಮ ಕೈಗೊಂಡಿಲ್ಲ. ತನಿಖೆ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಬೇಕು’ ಎಂದು ಅಮೃತಹಳ್ಳಿ ಪೊಲೀಸರಿಗೆ ನಿರ್ದೇಶನ ನೀಡಿತು.</p>.<p>ರಮೇಶ್ ಸಲ್ಲಿಸಿರುವ ಅರ್ಜಿಯಲ್ಲಿ 5ನೇ ಪ್ರತಿವಾದಿ ಆಗಿರುವ ಪಾಲಿಕೆ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಪರ ವಕೀಲರು, ‘ಎನ್.ಆರ್.ರಮೇಶ್ ವಿರುದ್ಧ 2015ರಲ್ಲೇ ದೂರು ದಾಖಲಿಸಿದ್ದರೂ ಕ್ರಮ ಕೈಗೊಂಡಿಲ್ಲ’ ಎಂದು ಪೀಠದ ಗಮನಕ್ಕೆ ತಂದರು. ವಿಚಾರಣೆಯನ್ನು ಪೀಠ ಜೂ.30ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>