ಈ ವೇಳೆ ಸರ್ಕಾರದ ಪರ ವಕೀಲರು, ‘ನಿರಾಶ್ರಿತರ ಪುನರ್ವಸತಿಗೆ ಯೋಜನೆಯನ್ನು ರೂಪಿಸಲಾಗುತ್ತಿದೆ. ಯೋಜನೆ ಅಂತಿಮಗೊಳಿಸಲು ಒಂದು ವಾರ ಕಾಲಾವಕಾಶಬೇಕು’ ಎಂದು ಕೋರಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಮಹದೇವಪುರ ವಲಯದ ಮಾರತಹಳ್ಳಿ ವ್ಯಾಪ್ತಿಯ ಕಾಡುಬೀಸನಹಳ್ಳಿ, ಕರಿಮ್ಮಯನ ಅಗ್ರಹಾರ, ಬೆಳ್ಳಂದೂರು, ತೂಬರಹಳ್ಳಿ, ಕುಂದಲಹಳ್ಳಿಯ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡುವ ಯೋಜನೆ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ವಿವರಗಳನ್ನು ಸಲ್ಲಿಸಿ’ ಎಂದು ನಿರ್ದೇಶಿಸಿ ಮಾರ್ಚ್ 6ಕ್ಕೆ ವಿಚಾರಣೆ ಮುಂದೂಡಿದೆ.