‘ನನ್ನ ವಿರುದ್ಧದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಮಹದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿದ್ದಾಗ ನಾನು ಕಾನೂನು ಹಾಗೂ ನಿಯಮಗಳಿಗೆ ಅನುಸಾರವಾಗಿಯೇ ಕರ್ತವ್ಯ ನಿರ್ವಹಿಸಿದ್ದೇನೆ. ಆದ್ದರಿಂದ ಎಸಿಬಿ ದಾಖಲಿಸಿಕೊಂಡಿರುವ ಎಫ್ಐಆರ್ ರದ್ದುಗೊಳಿಸಬೇಕು’ ಎಂದು ಕೃಷ್ಣಲಾಲ್ ಕೋರಿದ್ದಾರೆ. ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಲಾಗಿದೆ.