<p><strong>ಬೆಂಗಳೂರು:</strong>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯಲ್ಲಿ ಕಾರ್ಯ ನಿರ್ವಹಿಸಲು ಕರೆಯಲಾಗಿರುವ 48 ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಕುರಿತಂತೆ ಪುರಸಭೆಯಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಅಣ್ಣಮ್ಮ ಸೇರಿದಂತೆ 15 ಪೌರ ಕಾರ್ಮಿಕರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎ.ವಿ.ನಿಶಾಂತ್, ‘ಅರ್ಜಿದಾರರು 1990ರಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಈತನಕ ಕಾಯಂಗೊಳಿಸಿಲ್ಲ. ಏತನ್ಮಧ್ಯೆ ಹೊಸ ನೇಮಕಾತಿಗೆ ಮುಂದಾಗಿರುವುದು ಅರ್ಜಿದಾರರಿಗೆ ಅನ್ಯಾಯ ಉಂಟು ಮಾಡುತ್ತದೆ’ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಅರ್ಜಿದಾರರು ಪೌರ ಕಾರ್ಮಿಕರಾಗಿದ್ದು 25 ವರ್ಷಕ್ಕೂ ಹೆಚ್ಚು ಕಾಲದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಕಾಯಂಗೊಳಿಸದೆ ಈಗ ಏಕಾಏಕಿ ಹೊಸ ನೇಮಕಾತಿ ನಡೆಸುವುದು ತರವಲ್ಲ. ಇಂತಹ ವಿಷಯಗಳಲ್ಲಿ ಸರ್ಕಾರ ನ್ಯಾಯೋಚಿತವಾಗಿ ನಡೆದುಕೊಳ್ಳಬೇಕು’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು.</p>.<p>ಪ್ರತಿವಾದಿಯಾದ ನೆಲಮಂಗಲ ಪುರಸಭೆ ಮುಖ್ಯಾಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.</p>.<p>‘ನೆಲಮಂಗಲ ಪುರಸಭೆಯಲ್ಲಿ ನಾವು ಪೌರ ಕಾರ್ಮಿಕರರಾಗಿ, ಲೋಡರ್ಸ್, ಚಾಲಕರು ಹಾಗೂ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಗುತ್ತಿಗೆ ಆದಾರದಲ್ಲಿ 25 ವರ್ಷಗಳಿಂದ ಕೆಲಸ ಮಾಡುತ್ತಿರುವ ನಮ್ಮನ್ನು ಕಾಯಂ ಗೊಳಿಸದೆ ಹೊಸ ನೇಮಕಾತಿಗೆ ಮುಂದಾಗಿರುವ ಮುಖ್ಯಾಧಿಕಾರಿಯ ಕ್ರಮ ಕಾನೂನುಬಾಹಿರ’ ಎಂಬುದು ಅರ್ಜಿದಾರರ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯಲ್ಲಿ ಕಾರ್ಯ ನಿರ್ವಹಿಸಲು ಕರೆಯಲಾಗಿರುವ 48 ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಕುರಿತಂತೆ ಪುರಸಭೆಯಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಅಣ್ಣಮ್ಮ ಸೇರಿದಂತೆ 15 ಪೌರ ಕಾರ್ಮಿಕರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎ.ವಿ.ನಿಶಾಂತ್, ‘ಅರ್ಜಿದಾರರು 1990ರಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಈತನಕ ಕಾಯಂಗೊಳಿಸಿಲ್ಲ. ಏತನ್ಮಧ್ಯೆ ಹೊಸ ನೇಮಕಾತಿಗೆ ಮುಂದಾಗಿರುವುದು ಅರ್ಜಿದಾರರಿಗೆ ಅನ್ಯಾಯ ಉಂಟು ಮಾಡುತ್ತದೆ’ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಅರ್ಜಿದಾರರು ಪೌರ ಕಾರ್ಮಿಕರಾಗಿದ್ದು 25 ವರ್ಷಕ್ಕೂ ಹೆಚ್ಚು ಕಾಲದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಕಾಯಂಗೊಳಿಸದೆ ಈಗ ಏಕಾಏಕಿ ಹೊಸ ನೇಮಕಾತಿ ನಡೆಸುವುದು ತರವಲ್ಲ. ಇಂತಹ ವಿಷಯಗಳಲ್ಲಿ ಸರ್ಕಾರ ನ್ಯಾಯೋಚಿತವಾಗಿ ನಡೆದುಕೊಳ್ಳಬೇಕು’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು.</p>.<p>ಪ್ರತಿವಾದಿಯಾದ ನೆಲಮಂಗಲ ಪುರಸಭೆ ಮುಖ್ಯಾಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.</p>.<p>‘ನೆಲಮಂಗಲ ಪುರಸಭೆಯಲ್ಲಿ ನಾವು ಪೌರ ಕಾರ್ಮಿಕರರಾಗಿ, ಲೋಡರ್ಸ್, ಚಾಲಕರು ಹಾಗೂ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಗುತ್ತಿಗೆ ಆದಾರದಲ್ಲಿ 25 ವರ್ಷಗಳಿಂದ ಕೆಲಸ ಮಾಡುತ್ತಿರುವ ನಮ್ಮನ್ನು ಕಾಯಂ ಗೊಳಿಸದೆ ಹೊಸ ನೇಮಕಾತಿಗೆ ಮುಂದಾಗಿರುವ ಮುಖ್ಯಾಧಿಕಾರಿಯ ಕ್ರಮ ಕಾನೂನುಬಾಹಿರ’ ಎಂಬುದು ಅರ್ಜಿದಾರರ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>