ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಸಿದ್ಧವಿರುವುದಾಗಿ ಪೀಠಕ್ಕೆ ಬಿಎಂಆರ್ಸಿಎಲ್ ಶುಕ್ರವಾರ ಸ್ಪಷ್ಟಪಡಿಸಿತು. ‘ಮರಗಳು ಇರುವ ಸ್ಥಳಕ್ಕೆ ತೆರಳಿ ಸಮಿತಿ ಪರಿಶೀಲನೆ ನಡೆಸಬೇಕು. 872 ಮರಗಳು ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಗೆ ಒಳಪಟ್ಟಿವೆಯೇ, ಇಲ್ಲವೇ ಎಂಬುದನ್ನು ಅವಲೋಕನ ಮಾಡಬೇಕು. ಇವುಗಳಲ್ಲಿ ಯಾವ ಮರಗಳನ್ನಾದರೂ ಉಳಿಸಲು ಸಾಧ್ಯವೇ ಎಂಬುದನ್ನೂ ಪರಿಶೀಲಿಸಬೇಕು’ ಎಂದು ಸಮಿತಿಗೆ ನಿರ್ದೇಶನ ನೀಡಿತು.