<p><strong>ಬೆಂಗಳೂರು: </strong>ಫೋನ್ಪೇ ಮೂಲಕ ಪೊಲೀಸ್ ಕಾನ್ಸ್ಟೇಬಲ್ಗೆ ಹಣ ಪಾವತಿ ಮಾಡಿರುವ ಸಂಬಂಧ ಮಾಹಿತಿ ಪಡೆಯುವಂತೆ ಸರ್ಕಾರಿ ವಕೀಲರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕಬ್ಬಿಣದ ಸರಳು ಕಳ್ಳತನ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಐವರು ಪೊಲೀಸರು ₹15 ಲಕ್ಷ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಅರ್ಜಿದಾರರಾದ, ಗುಜರಿ ವ್ಯವಹಾರ ನಡೆಸುವ ಹೊಸಕೋಟೆ ತಾಲ್ಲೂಕಿನ ಯಾರೋಬ್, ಮುಸ್ತಾಕ್ ಪಾಷಾ, ಅಫ್ರೋಜ್ ಮತ್ತು ಸೈಯದ್ ಬಕ್ಷ್ ದೂರಿದ್ದಾರೆ.</p>.<p>‘ಜ.14ರಂದು ನಮ್ಮ ಅಂಗಡಿಗೆ ಬಂದಿದ್ದ ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ನಾಲ್ವರು ಕಾನ್ಸ್ಟೇಬಲ್ಗಳು ನಮ್ಮ ಮೇಲೆ ಹಲ್ಲೆ ನಡೆಸಿದರು. ಕಬ್ಬಿಣದ ಸರಳು ಕಳ್ಳತನದ ಪ್ರಕರಣ ತಪ್ಪಿಸಲು ₹25 ಲಕ್ಷ ಲಂಚ ಕೇಳಿದರು. ಅದೇ ದಿನ ₹15 ಲಕ್ಷ ನೀಡಲಾಗಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಎನ್.ಚಂದ್ರಶೇಖರ್ ಎಂಬ ಕಾನ್ಸ್ಟೆಬಲ್ಗೆ ಫೋನ್–ಪೇ ಆ್ಯಪ್ ಮೂಲಕ ₹4 ಸಾವಿರ ಪಾವತಿಸಲಾಗಿದೆ. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ದೂರು ನೀಡಲಾಗಿದೆ’ ಎಂದೂ ವಿವರಿಸಿದ್ದಾರೆ.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ಪೀಠ, ರಾಜ್ಯ ಸರ್ಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಕಮಿಷನರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಫೋನ್ಪೇ ಮೂಲಕ ಪೊಲೀಸ್ ಕಾನ್ಸ್ಟೇಬಲ್ಗೆ ಹಣ ಪಾವತಿ ಮಾಡಿರುವ ಸಂಬಂಧ ಮಾಹಿತಿ ಪಡೆಯುವಂತೆ ಸರ್ಕಾರಿ ವಕೀಲರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕಬ್ಬಿಣದ ಸರಳು ಕಳ್ಳತನ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಐವರು ಪೊಲೀಸರು ₹15 ಲಕ್ಷ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಅರ್ಜಿದಾರರಾದ, ಗುಜರಿ ವ್ಯವಹಾರ ನಡೆಸುವ ಹೊಸಕೋಟೆ ತಾಲ್ಲೂಕಿನ ಯಾರೋಬ್, ಮುಸ್ತಾಕ್ ಪಾಷಾ, ಅಫ್ರೋಜ್ ಮತ್ತು ಸೈಯದ್ ಬಕ್ಷ್ ದೂರಿದ್ದಾರೆ.</p>.<p>‘ಜ.14ರಂದು ನಮ್ಮ ಅಂಗಡಿಗೆ ಬಂದಿದ್ದ ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ನಾಲ್ವರು ಕಾನ್ಸ್ಟೇಬಲ್ಗಳು ನಮ್ಮ ಮೇಲೆ ಹಲ್ಲೆ ನಡೆಸಿದರು. ಕಬ್ಬಿಣದ ಸರಳು ಕಳ್ಳತನದ ಪ್ರಕರಣ ತಪ್ಪಿಸಲು ₹25 ಲಕ್ಷ ಲಂಚ ಕೇಳಿದರು. ಅದೇ ದಿನ ₹15 ಲಕ್ಷ ನೀಡಲಾಗಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಎನ್.ಚಂದ್ರಶೇಖರ್ ಎಂಬ ಕಾನ್ಸ್ಟೆಬಲ್ಗೆ ಫೋನ್–ಪೇ ಆ್ಯಪ್ ಮೂಲಕ ₹4 ಸಾವಿರ ಪಾವತಿಸಲಾಗಿದೆ. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ದೂರು ನೀಡಲಾಗಿದೆ’ ಎಂದೂ ವಿವರಿಸಿದ್ದಾರೆ.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ಪೀಠ, ರಾಜ್ಯ ಸರ್ಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಕಮಿಷನರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>