<p><strong>ಬೆಂಗಳೂರು: </strong>ಭದ್ರಾವತಿ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಮಾನ್ಯತೆ ಹಿಂಪಡೆದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>2018ರ ನವೆಂಬರ್ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು, 24 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಪೂರ್ವಾನುಮತಿ ಪಡೆಯದೇ ವಿದ್ಯಾರ್ಥಿಗಳನ್ನು ಕರೆದೊಯ್ದಿರುವ ಶಿಕ್ಷಣ ಸಂಸ್ಥೆ ಬೇಜವಾಬ್ದಾರಿ ವಹಿಸಿದೆ ಎಂದು ಆರೋಪಿಸಿ ಮಾನ್ಯತೆಯನ್ನು ವಾಪಸ್ ಪಡೆಯಲಾಗಿತ್ತು.</p>.<p>‘ಮಾನ್ಯತೆ ಹಿಂತೆಗೆದುಕೊಳ್ಳುವ ಆದೇಶದಲ್ಲಿ ಸಕಾರಣಗಳನ್ನು ಶಿಕ್ಷಣ ಇಲಾಖೆ ನೀಡಿಲ್ಲ. ದುರಾದೃಷ್ಟಕರ ಅಪಘಾತ ನಡೆದಿರುವುದನ್ನು ಶಿಕ್ಷಣ ಕಾಯ್ದೆಯ ಸೆಕ್ಷನ್ 39ರ ವ್ಯಾಪ್ತಿಗೆ ತರಲು ಆಗುವುದಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>‘ಅಪಘಾತದಲ್ಲಿ ಗಾಯಗಳಾದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಚಿಕಿತ್ಸೆಗಾಗಿ ₹22 ಲಕ್ಷವನ್ನು ಸಂಸ್ಥೆ ಖರ್ಚು ಮಾಡಿದೆ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸಿದರೂ ಶಿಕ್ಷಣ ಇಲಾಖೆಯ ಶಿವಮೊಗ್ಗ ಉಪನಿರ್ದೇಶಕರು 2019ರ ಮೇ ನಲ್ಲಿ ಸಂಸ್ಥೆಯ ಮಾನ್ಯತೆ ಹಿಂದಕ್ಕೆ ಪಡೆದಿದ್ದಾರೆ’ ಎಂದು ಸಂಸ್ಥೆಯ ಪರ ವಕೀಲರು ತಿಳಿಸಿದರು.</p>.<p>2011 ಜನವರಿ 27ರಲ್ಲಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ, ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಕೆಎಸ್ಆರ್ಟಿಸಿ ಬಸ್ಗಳನ್ನು ಮಾತ್ರ ಪ್ರವಾಸಕ್ಕೆ ಬಳಸಬೇಕು. ಅವುಗಳನ್ನು ಪಾಲಿಸುವಲ್ಲಿ ಈ ಸಂಸ್ಥೆ ವಿಫಲವಾಗಿದೆ ಎಂದು ಇಲಾಖೆ ತಿಳಿಸಿತು.</p>.<p>ಈ ಆದೇಶ ರದ್ದುಗೊಳಿಸಿದ ನ್ಯಾಯಮೂರ್ತಿ ಆರ್. ದೇವದಾಸ್, ‘ಸುತ್ತೋಲೆಯನ್ನು ಪಾಲಿಸುವಲ್ಲಿ ಶಿಕ್ಷಣ ಸಂಸ್ಥೆ ವಿಫಲವಾಗಿದ್ದರೂ ಮಾನ್ಯತೆ ಹಿಂಪಡೆಯುವಂತಹ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಇದೆಯೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭದ್ರಾವತಿ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಮಾನ್ಯತೆ ಹಿಂಪಡೆದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>2018ರ ನವೆಂಬರ್ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು, 24 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಪೂರ್ವಾನುಮತಿ ಪಡೆಯದೇ ವಿದ್ಯಾರ್ಥಿಗಳನ್ನು ಕರೆದೊಯ್ದಿರುವ ಶಿಕ್ಷಣ ಸಂಸ್ಥೆ ಬೇಜವಾಬ್ದಾರಿ ವಹಿಸಿದೆ ಎಂದು ಆರೋಪಿಸಿ ಮಾನ್ಯತೆಯನ್ನು ವಾಪಸ್ ಪಡೆಯಲಾಗಿತ್ತು.</p>.<p>‘ಮಾನ್ಯತೆ ಹಿಂತೆಗೆದುಕೊಳ್ಳುವ ಆದೇಶದಲ್ಲಿ ಸಕಾರಣಗಳನ್ನು ಶಿಕ್ಷಣ ಇಲಾಖೆ ನೀಡಿಲ್ಲ. ದುರಾದೃಷ್ಟಕರ ಅಪಘಾತ ನಡೆದಿರುವುದನ್ನು ಶಿಕ್ಷಣ ಕಾಯ್ದೆಯ ಸೆಕ್ಷನ್ 39ರ ವ್ಯಾಪ್ತಿಗೆ ತರಲು ಆಗುವುದಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>‘ಅಪಘಾತದಲ್ಲಿ ಗಾಯಗಳಾದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಚಿಕಿತ್ಸೆಗಾಗಿ ₹22 ಲಕ್ಷವನ್ನು ಸಂಸ್ಥೆ ಖರ್ಚು ಮಾಡಿದೆ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸಿದರೂ ಶಿಕ್ಷಣ ಇಲಾಖೆಯ ಶಿವಮೊಗ್ಗ ಉಪನಿರ್ದೇಶಕರು 2019ರ ಮೇ ನಲ್ಲಿ ಸಂಸ್ಥೆಯ ಮಾನ್ಯತೆ ಹಿಂದಕ್ಕೆ ಪಡೆದಿದ್ದಾರೆ’ ಎಂದು ಸಂಸ್ಥೆಯ ಪರ ವಕೀಲರು ತಿಳಿಸಿದರು.</p>.<p>2011 ಜನವರಿ 27ರಲ್ಲಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ, ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಕೆಎಸ್ಆರ್ಟಿಸಿ ಬಸ್ಗಳನ್ನು ಮಾತ್ರ ಪ್ರವಾಸಕ್ಕೆ ಬಳಸಬೇಕು. ಅವುಗಳನ್ನು ಪಾಲಿಸುವಲ್ಲಿ ಈ ಸಂಸ್ಥೆ ವಿಫಲವಾಗಿದೆ ಎಂದು ಇಲಾಖೆ ತಿಳಿಸಿತು.</p>.<p>ಈ ಆದೇಶ ರದ್ದುಗೊಳಿಸಿದ ನ್ಯಾಯಮೂರ್ತಿ ಆರ್. ದೇವದಾಸ್, ‘ಸುತ್ತೋಲೆಯನ್ನು ಪಾಲಿಸುವಲ್ಲಿ ಶಿಕ್ಷಣ ಸಂಸ್ಥೆ ವಿಫಲವಾಗಿದ್ದರೂ ಮಾನ್ಯತೆ ಹಿಂಪಡೆಯುವಂತಹ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಇದೆಯೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>