2018ರ ನವೆಂಬರ್ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು, 24 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಪೂರ್ವಾನುಮತಿ ಪಡೆಯದೇ ವಿದ್ಯಾರ್ಥಿಗಳನ್ನು ಕರೆದೊಯ್ದಿರುವ ಶಿಕ್ಷಣ ಸಂಸ್ಥೆ ಬೇಜವಾಬ್ದಾರಿ ವಹಿಸಿದೆ ಎಂದು ಆರೋಪಿಸಿ ಮಾನ್ಯತೆಯನ್ನು ವಾಪಸ್ ಪಡೆಯಲಾಗಿತ್ತು.