<p><strong>ಬೆಂಗಳೂರು:</strong> ಬೆಳ್ಳಂದೂರು ಪ್ರದೇಶದಲ್ಲಿ ಗುಡಿಸಿಲುಗಳನ್ನು ನಾಶ ಮಾಡಿದ್ದ ಪ್ರಕರಣದ ಸಂಬಂಧ 351 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಸಮಗ್ರ ಯೋಜನೆಯನ್ನು ಸರ್ಕಾರ ಆರಂಭಿಸದಿದ್ದರೆ ಅವಿದೆಯತೆ ವಿಚಾರಣೆ ಆರಂಭಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.</p>.<p>ಕೋವಿಡ್ ಕಾರಣಕ್ಕೆ ಯೋಜನೆ ಸಿದ್ಧಪಡಿಸಲು ವಿಳಂಬವಾಗುತ್ತಿದೆ ಎಂಬ ರಾಜ್ಯ ಸರ್ಕಾರದ ಉತ್ತರಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಎಲ್ಲಾ ಯೋಜನೆಗಳ ವಿಳಂಬಕ್ಕೂ ಕೋವಿಡ್ ಕಾರಣ ನೀಡಿದರೆ ಕ್ಷಮಿಸುವುದಿಲ್ಲ’ ಎಂದು ಹೇಳಿದೆ.</p>.<p>‘ಬಾಂಗ್ಲಾದೇಶದ ಅಕ್ರಮ ವಲಸಿಗರು ಎಂಬ ಶಂಕೆಯಲ್ಲಿ ಗುಡಿಸಿಲುಗಳನ್ನು ನಾಶ ಮಾಡಲಾಗಿದೆ. ಪುನರ್ವಸತಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಯನ್ನು ಸರ್ಕಾರ ರೂಪಿಸಿಲ್ಲ. ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ನೀಡಬೇಕಿರುವ ಹಕ್ಕು ದೊರಕಿಸುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳ್ಳಂದೂರು ಪ್ರದೇಶದಲ್ಲಿ ಗುಡಿಸಿಲುಗಳನ್ನು ನಾಶ ಮಾಡಿದ್ದ ಪ್ರಕರಣದ ಸಂಬಂಧ 351 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಸಮಗ್ರ ಯೋಜನೆಯನ್ನು ಸರ್ಕಾರ ಆರಂಭಿಸದಿದ್ದರೆ ಅವಿದೆಯತೆ ವಿಚಾರಣೆ ಆರಂಭಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.</p>.<p>ಕೋವಿಡ್ ಕಾರಣಕ್ಕೆ ಯೋಜನೆ ಸಿದ್ಧಪಡಿಸಲು ವಿಳಂಬವಾಗುತ್ತಿದೆ ಎಂಬ ರಾಜ್ಯ ಸರ್ಕಾರದ ಉತ್ತರಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಎಲ್ಲಾ ಯೋಜನೆಗಳ ವಿಳಂಬಕ್ಕೂ ಕೋವಿಡ್ ಕಾರಣ ನೀಡಿದರೆ ಕ್ಷಮಿಸುವುದಿಲ್ಲ’ ಎಂದು ಹೇಳಿದೆ.</p>.<p>‘ಬಾಂಗ್ಲಾದೇಶದ ಅಕ್ರಮ ವಲಸಿಗರು ಎಂಬ ಶಂಕೆಯಲ್ಲಿ ಗುಡಿಸಿಲುಗಳನ್ನು ನಾಶ ಮಾಡಲಾಗಿದೆ. ಪುನರ್ವಸತಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಯನ್ನು ಸರ್ಕಾರ ರೂಪಿಸಿಲ್ಲ. ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ನೀಡಬೇಕಿರುವ ಹಕ್ಕು ದೊರಕಿಸುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>