ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ವಿರುದ್ಧ ಅವಿಧೇಯತೆ ಪ್ರಕ್ರಿಯೆ: ಹೈಕೋರ್ಟ್ ಎಚ್ಚರಿಕೆ

ಬೆಳ್ಳಂದೂರಿನಲ್ಲಿ ಗುಡಿಸಲು ನಾಶ ಪ್ರಕರಣ
Last Updated 16 ಸೆಪ್ಟೆಂಬರ್ 2020, 4:45 IST
ಅಕ್ಷರ ಗಾತ್ರ

ಬೆಂಗಳೂರು: ಬೆಳ್ಳಂದೂರು ಪ್ರದೇಶದಲ್ಲಿ ಗುಡಿಸಿಲುಗಳನ್ನು ನಾಶ ಮಾಡಿದ್ದ ಪ್ರಕರಣದ ಸಂಬಂಧ 351 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಸಮಗ್ರ ಯೋಜನೆಯನ್ನು ಸರ್ಕಾರ ಆರಂಭಿಸದಿದ್ದರೆ ಅವಿದೆಯತೆ ವಿಚಾರಣೆ ಆರಂಭಿಸಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಕೋವಿಡ್ ಕಾರಣಕ್ಕೆ ಯೋಜನೆ ಸಿದ್ಧಪಡಿಸಲು ವಿಳಂಬವಾಗುತ್ತಿದೆ ಎಂಬ ರಾಜ್ಯ ಸರ್ಕಾರದ ಉತ್ತರಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಎಲ್ಲಾ ಯೋಜನೆಗಳ ವಿಳಂಬಕ್ಕೂ ಕೋವಿಡ್ ಕಾರಣ ನೀಡಿದರೆ ಕ್ಷಮಿಸುವುದಿಲ್ಲ’ ಎಂದು ಹೇಳಿದೆ.

‘ಬಾಂಗ್ಲಾದೇಶದ ಅಕ್ರಮ ವಲಸಿಗರು ಎಂಬ ಶಂಕೆಯಲ್ಲಿ ಗುಡಿಸಿಲುಗಳನ್ನು ನಾಶ ಮಾಡಲಾಗಿದೆ. ಪುನರ್ವಸತಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಯನ್ನು ಸರ್ಕಾರ ರೂಪಿಸಿಲ್ಲ. ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ನೀಡಬೇಕಿರುವ ಹಕ್ಕು ದೊರಕಿಸುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT