<p><strong>ಬೆಂಗಳೂರು:</strong> ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ಒತ್ತುವರಿ ಆಗಿರುವ 35 ಎಕರೆ 39 ಗುಂಟೆ ಸರ್ಕಾರಿ ಜಮೀನು ತೆರವಿಗೆ ಅಗತ್ಯ ಕ್ರಮ ಜರುಗಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಈ ಕುರಿತಂತೆ ಮುತ್ತು ಮಾರಿಯಮ್ಮ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಲೇವಾರಿ ಮಾಡಿದೆ.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ವಾದ ಮಂಡಿಸಿ, ‘ಮಲ್ಲಸಂದ್ರ ಗ್ರಾಮದಲ್ಲಿನ ಸರ್ವೇ ನಂಬರ್ 33ರಲ್ಲಿನ 35ಎಕರೆ 39 ಗುಂಟೆ ಜಾಗವನ್ನು ಸರ್ಕಾರಿ ಬಂಡೆ ಖರಾಬು ಎಂದು ವರ್ಗೀಕರಿಸಲಾಗಿದೆ. ಆದರೆ, ಈ ಜಾಗದಲ್ಲಿ ಒತ್ತುವರಿ ಆಗಿದ್ದು ಇದರ ಮೇಲೆ ಜನಪ್ರತಿನಿಧಿಗಳು ಹಾಗೂ ಭೂ ಕಬಳಿಕೆದಾರರ ಕಣ್ಣು ನೆಟ್ಟಿದೆ. ಆದ್ದರಿಂದ, ಕಂದಾಯ ಇಲಾಖೆಯ ಸ್ವಾಧೀನದಲ್ಲಿರುವ ಈ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಮಲ್ಲಸಂದ್ರದ ಸರ್ವೇ ನಂಬರ್ 33ರಲ್ಲಿನ ಸರ್ಕಾರಿ ಜಮೀನನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ವರ್ಗಾವಣೆ ಮಾಡಬೇಕು ಎಂಬ ಮನವಿಯನ್ನು ಅರ್ಜಿದಾರರು ಸರ್ಕಾರಕ್ಕೆ ಸಲ್ಲಿಸಬಹುದು’ ಎಂದು ಸೂಚಿಸಿ, ಅರ್ಜಿ ಇತ್ಯರ್ಥಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ಒತ್ತುವರಿ ಆಗಿರುವ 35 ಎಕರೆ 39 ಗುಂಟೆ ಸರ್ಕಾರಿ ಜಮೀನು ತೆರವಿಗೆ ಅಗತ್ಯ ಕ್ರಮ ಜರುಗಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಈ ಕುರಿತಂತೆ ಮುತ್ತು ಮಾರಿಯಮ್ಮ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಲೇವಾರಿ ಮಾಡಿದೆ.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ವಾದ ಮಂಡಿಸಿ, ‘ಮಲ್ಲಸಂದ್ರ ಗ್ರಾಮದಲ್ಲಿನ ಸರ್ವೇ ನಂಬರ್ 33ರಲ್ಲಿನ 35ಎಕರೆ 39 ಗುಂಟೆ ಜಾಗವನ್ನು ಸರ್ಕಾರಿ ಬಂಡೆ ಖರಾಬು ಎಂದು ವರ್ಗೀಕರಿಸಲಾಗಿದೆ. ಆದರೆ, ಈ ಜಾಗದಲ್ಲಿ ಒತ್ತುವರಿ ಆಗಿದ್ದು ಇದರ ಮೇಲೆ ಜನಪ್ರತಿನಿಧಿಗಳು ಹಾಗೂ ಭೂ ಕಬಳಿಕೆದಾರರ ಕಣ್ಣು ನೆಟ್ಟಿದೆ. ಆದ್ದರಿಂದ, ಕಂದಾಯ ಇಲಾಖೆಯ ಸ್ವಾಧೀನದಲ್ಲಿರುವ ಈ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಮಲ್ಲಸಂದ್ರದ ಸರ್ವೇ ನಂಬರ್ 33ರಲ್ಲಿನ ಸರ್ಕಾರಿ ಜಮೀನನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ವರ್ಗಾವಣೆ ಮಾಡಬೇಕು ಎಂಬ ಮನವಿಯನ್ನು ಅರ್ಜಿದಾರರು ಸರ್ಕಾರಕ್ಕೆ ಸಲ್ಲಿಸಬಹುದು’ ಎಂದು ಸೂಚಿಸಿ, ಅರ್ಜಿ ಇತ್ಯರ್ಥಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>