ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ವಾದ ಮಂಡಿಸಿ, ‘ಮಲ್ಲಸಂದ್ರ ಗ್ರಾಮದಲ್ಲಿನ ಸರ್ವೇ ನಂಬರ್ 33ರಲ್ಲಿನ 35ಎಕರೆ 39 ಗುಂಟೆ ಜಾಗವನ್ನು ಸರ್ಕಾರಿ ಬಂಡೆ ಖರಾಬು ಎಂದು ವರ್ಗೀಕರಿಸಲಾಗಿದೆ. ಆದರೆ, ಈ ಜಾಗದಲ್ಲಿ ಒತ್ತುವರಿ ಆಗಿದ್ದು ಇದರ ಮೇಲೆ ಜನಪ್ರತಿನಿಧಿಗಳು ಹಾಗೂ ಭೂ ಕಬಳಿಕೆದಾರರ ಕಣ್ಣು ನೆಟ್ಟಿದೆ. ಆದ್ದರಿಂದ, ಕಂದಾಯ ಇಲಾಖೆಯ ಸ್ವಾಧೀನದಲ್ಲಿರುವ ಈ ಜಮೀನನ್ನು ಬಿಬಿಎಂಪಿಗೆ ವರ್ಗಾಯಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.