<p><strong>ಬೆಂಗಳೂರು</strong>: ‘ಬೀದಿ ಬದಿ ವ್ಯಾಪಾರಿಗಳು ಹಾಗೂ ದೊಡ್ಡ-ದೊಡ್ಡ ರೆಸ್ಟೋರೆಂಟ್ಗಳು ಆರೋಗ್ಯ ಮತ್ತು ಸುರಕ್ಷತಾ ಮಾನದಂಡ ನಿಯಮಗಳನ್ನು ಚಾಚೂ ತಪ್ಪದೆ ಅನುಸರಣೆ ಮಾಡುವ ಜತೆಗೆ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿಗಾ ಇರಿಸುವುದಕ್ಕೆ ಸೂಕ್ತ ಕಾರ್ಯ ವಿಧಾನವೊಂದನ್ನು ರೂಪಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.</p><p>‘ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಸಂಘ’ ದ ಗೌರವ ಕಾರ್ಯದರ್ಶಿ ನಾಗರಾಜ ಧನ್ಯ ಮತ್ತು ‘ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘ’ದ ಅಧ್ಯಕ್ಷ ಕೆ.ಎನ್. ವಾಸುದೇವ ಅಡಿಗ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.</p>.<p>‘ಮನುಷ್ಯರ ಆರೋಗ್ಯಕ್ಕೆ ಎದುರಾಗುವ ಅಪಾಯಗಳ ಬಗ್ಗೆ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006ರ ನಿಯಮಗಳ ಅಡಿಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ರೆಸ್ಟೋರೆಂಟ್ಗಳಿಗೆ ತ್ರಿಪಕ್ಷೀಯ ಮಾರ್ಗಸೂಚಿಯೊಂದನ್ನು ರೂಪಿಸಬೇಕು’ ಎಂದೂ ನ್ಯಾಯಪೀಠ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಖಡಕ್ ತಾಕೀತು ಮಾಡಿದೆ.</p>.<p>‘ಅರ್ಜಿದಾರರು ಆಕ್ಷೇಪಿಸಿರುವ ನಿಬಂಧನೆಗಳನ್ನು ಅಸಂವಿಧಾನಿಕ ಎಂದು ನಿರ್ಣಯಿಸಿ ಅವುಗಳನ್ನು ರದ್ದುಗೊಳಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ.</p>.<p><strong>ಏನಿದು ಅರ್ಜಿ?:</strong> ‘ಆಹಾರ ಸುರಕ್ಷತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸಿ, ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು’ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಸಂಬಂಧ ಆಹಾರ ಸುರಕ್ಷಾ ಆಯುಕ್ತರು 2012ರ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದ್ದರು.</p>.<p>‘ಈ ಅಧಿಸೂಚನೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಂತ್ರಣ, (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ನಿಯಮಗಳು-2011, ಆಹಾರ ಸುರಕ್ಷತೆ ಮತ್ತು ಮಾನದಂಡಗಳು, ಆಹಾರ ಉತ್ಪನ್ನಗಳ ಮಾನದಂಡಗಳು ಮತ್ತು ಆಹಾರ ಸೇರ್ಪಡೆಗಳ ನಿಯಮಗಳು-2011 ಮತ್ತು ಆಹಾರ ಸುರಕ್ಷತೆ ಮತ್ತು ಪ್ರಮಾಣಿತ ಕಾಯ್ದೆ-2006ರ 50 ರಿಂದ 65 ರವರೆಗಿನ ಕಲಂಗಳು ಅಸಾಂವಿಧಾನಿಕ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.</p>.<p>‘ಮಾನದಂಡಗಳನ್ನು ಅನ್ವಯಿಸಲು ನಮಗೆ ಸಾಧ್ಯವಿಲ್ಲ’ ಎಂದು ಅರ್ಜಿದಾರರಾದ ಹೋಟೆಲ್ ಸಂಘಗಳು ಪ್ರತಿಪಾದಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೀದಿ ಬದಿ ವ್ಯಾಪಾರಿಗಳು ಹಾಗೂ ದೊಡ್ಡ-ದೊಡ್ಡ ರೆಸ್ಟೋರೆಂಟ್ಗಳು ಆರೋಗ್ಯ ಮತ್ತು ಸುರಕ್ಷತಾ ಮಾನದಂಡ ನಿಯಮಗಳನ್ನು ಚಾಚೂ ತಪ್ಪದೆ ಅನುಸರಣೆ ಮಾಡುವ ಜತೆಗೆ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿಗಾ ಇರಿಸುವುದಕ್ಕೆ ಸೂಕ್ತ ಕಾರ್ಯ ವಿಧಾನವೊಂದನ್ನು ರೂಪಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.</p><p>‘ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಸಂಘ’ ದ ಗೌರವ ಕಾರ್ಯದರ್ಶಿ ನಾಗರಾಜ ಧನ್ಯ ಮತ್ತು ‘ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘ’ದ ಅಧ್ಯಕ್ಷ ಕೆ.ಎನ್. ವಾಸುದೇವ ಅಡಿಗ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.</p>.<p>‘ಮನುಷ್ಯರ ಆರೋಗ್ಯಕ್ಕೆ ಎದುರಾಗುವ ಅಪಾಯಗಳ ಬಗ್ಗೆ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006ರ ನಿಯಮಗಳ ಅಡಿಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ರೆಸ್ಟೋರೆಂಟ್ಗಳಿಗೆ ತ್ರಿಪಕ್ಷೀಯ ಮಾರ್ಗಸೂಚಿಯೊಂದನ್ನು ರೂಪಿಸಬೇಕು’ ಎಂದೂ ನ್ಯಾಯಪೀಠ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಖಡಕ್ ತಾಕೀತು ಮಾಡಿದೆ.</p>.<p>‘ಅರ್ಜಿದಾರರು ಆಕ್ಷೇಪಿಸಿರುವ ನಿಬಂಧನೆಗಳನ್ನು ಅಸಂವಿಧಾನಿಕ ಎಂದು ನಿರ್ಣಯಿಸಿ ಅವುಗಳನ್ನು ರದ್ದುಗೊಳಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ.</p>.<p><strong>ಏನಿದು ಅರ್ಜಿ?:</strong> ‘ಆಹಾರ ಸುರಕ್ಷತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸಿ, ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು’ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಸಂಬಂಧ ಆಹಾರ ಸುರಕ್ಷಾ ಆಯುಕ್ತರು 2012ರ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದ್ದರು.</p>.<p>‘ಈ ಅಧಿಸೂಚನೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಂತ್ರಣ, (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ನಿಯಮಗಳು-2011, ಆಹಾರ ಸುರಕ್ಷತೆ ಮತ್ತು ಮಾನದಂಡಗಳು, ಆಹಾರ ಉತ್ಪನ್ನಗಳ ಮಾನದಂಡಗಳು ಮತ್ತು ಆಹಾರ ಸೇರ್ಪಡೆಗಳ ನಿಯಮಗಳು-2011 ಮತ್ತು ಆಹಾರ ಸುರಕ್ಷತೆ ಮತ್ತು ಪ್ರಮಾಣಿತ ಕಾಯ್ದೆ-2006ರ 50 ರಿಂದ 65 ರವರೆಗಿನ ಕಲಂಗಳು ಅಸಾಂವಿಧಾನಿಕ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.</p>.<p>‘ಮಾನದಂಡಗಳನ್ನು ಅನ್ವಯಿಸಲು ನಮಗೆ ಸಾಧ್ಯವಿಲ್ಲ’ ಎಂದು ಅರ್ಜಿದಾರರಾದ ಹೋಟೆಲ್ ಸಂಘಗಳು ಪ್ರತಿಪಾದಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>