ಆಕ್ಷೇಪಣೆ ಏನು?: ‘ಕಾಲುವೆಯಲ್ಲಿ ಅಕ್ರಮವಾಗಿ ನೀರೆತ್ತುವುದರಿಂದ ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದ ಅಂಚಿನ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ. ಇದರಿಂದಾಗಿ ರೈತರು ಕಷ್ಟ ಎದುರಿಸುತ್ತಿದ್ದಾರೆ. ಅಚ್ಚುಕಟ್ಟು ಅಂಚಿನ ಪ್ರದೇಶಗಳಿಗೆ ನೀರು ಬರುವುದನ್ನು ತಡೆಯುತ್ತಿರುವವರು ರಾಜಕೀಯ ಪ್ರಭಾವಿಗಳಾಗಿದ್ದರೆ. ಈ ಕುರಿತಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ’ ಎಂದು ಅರ್ಜಿದಾರರು ದೂರಿದ್ದರು. ಅರ್ಜಿದಾರರ ಪರ ಬಿ.ಎಂ.ಹಾಲಸ್ವಾಮಿ ವಾದ ಮಂಡಿಸಿದರು.