<p><strong>ಬೆಂಗಳೂರು</strong>: ಕೆ.ಆರ್.ಪುರದ ದೊಡ್ಡನೆಕುಂದಿ ಬಳಿಯ ಕೈಗಾರಿಕಾ ಭೂಮಿಯನ್ನುಗ್ರ್ಯಾಫೈಟ್ ಇಂಡಿಯಾ ಲಿಮಿಟೆಡ್ ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿರುವ 41 ಎಕರೆಯನ್ನು ರಿಯಲ್ ಎಸ್ಟೇಟ್ ಲಾಭಕ್ಕೆ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿ ವಕೀಲ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>‘ದೊಡ್ಡನೆಕುಂದಿ ಕೈಗಾರಿಕಾ ಪ್ರದೇಶದಲ್ಲಿ 1972ರಲ್ಲಿ ಈ ಕಂಪನಿಗೆ ₹5 ಲಕ್ಷಕ್ಕೆ ನೀಡಲಾಗಿದೆ. ಈ ಜಾಗದಲ್ಲಿ ಉದ್ಯಮವನ್ನು ಈ ಕಂಪನಿ 1980ರಿಂದ 2020ರ ತನಕ ನಿರ್ವಹಿಸಿತ್ತು. ಈ ನಡುವೆ, 2006ರಲ್ಲಿ 15 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಡೆವಲಪರ್ಗೆ ಸರ್ಕಾರದ ಅನುಮೋದನೆ ಇಲ್ಲದೆ ಮಾರಾಟ ಮಾಡಿದೆ’ ಎಂದು ಅರ್ಜಿದಾರರು ದೂರಿದ್ದಾರೆ.</p>.<p>ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಇಡೀ ಕೈಗಾರಿಕೆಯ ಕಾರ್ಯಾಚರಣೆ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ಪಿಸಿಬಿ) 2019ರ ಫೆಬ್ರುವರಿಯಲ್ಲಿ ನಿರ್ದೇಶನ ನೀಡಿತ್ತು. 2019ರ ಏಪ್ರಿಲ್ನಲ್ಲಿ ಹಸಿರು ನ್ಯಾಯಮಂಡಳಿ(ಎನ್ಜಿಟಿ) ಆದೇಶ ಅನುಸರಿಸಿ ಕಂಪನಿಯ ಕಾರ್ಯಾಚರಣೆ ಸಂಪೂರ್ಣ ಮುಚ್ಚಲ್ಪಟ್ಟಿದೆ.</p>.<p>‘ಈ ಉಳಿಕೆ ಭೂಮಿಯನ್ನೂ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ₹900 ಕೋಟಿಗೆ ಮಾರಾಟ ಮಾಡಲು ಕಂಪನಿ ಪ್ರಯತ್ನಿಸುತ್ತಿದೆ. ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆ.ಆರ್.ಪುರದ ದೊಡ್ಡನೆಕುಂದಿ ಬಳಿಯ ಕೈಗಾರಿಕಾ ಭೂಮಿಯನ್ನುಗ್ರ್ಯಾಫೈಟ್ ಇಂಡಿಯಾ ಲಿಮಿಟೆಡ್ ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿರುವ 41 ಎಕರೆಯನ್ನು ರಿಯಲ್ ಎಸ್ಟೇಟ್ ಲಾಭಕ್ಕೆ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿ ವಕೀಲ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>‘ದೊಡ್ಡನೆಕುಂದಿ ಕೈಗಾರಿಕಾ ಪ್ರದೇಶದಲ್ಲಿ 1972ರಲ್ಲಿ ಈ ಕಂಪನಿಗೆ ₹5 ಲಕ್ಷಕ್ಕೆ ನೀಡಲಾಗಿದೆ. ಈ ಜಾಗದಲ್ಲಿ ಉದ್ಯಮವನ್ನು ಈ ಕಂಪನಿ 1980ರಿಂದ 2020ರ ತನಕ ನಿರ್ವಹಿಸಿತ್ತು. ಈ ನಡುವೆ, 2006ರಲ್ಲಿ 15 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಡೆವಲಪರ್ಗೆ ಸರ್ಕಾರದ ಅನುಮೋದನೆ ಇಲ್ಲದೆ ಮಾರಾಟ ಮಾಡಿದೆ’ ಎಂದು ಅರ್ಜಿದಾರರು ದೂರಿದ್ದಾರೆ.</p>.<p>ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಇಡೀ ಕೈಗಾರಿಕೆಯ ಕಾರ್ಯಾಚರಣೆ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ಪಿಸಿಬಿ) 2019ರ ಫೆಬ್ರುವರಿಯಲ್ಲಿ ನಿರ್ದೇಶನ ನೀಡಿತ್ತು. 2019ರ ಏಪ್ರಿಲ್ನಲ್ಲಿ ಹಸಿರು ನ್ಯಾಯಮಂಡಳಿ(ಎನ್ಜಿಟಿ) ಆದೇಶ ಅನುಸರಿಸಿ ಕಂಪನಿಯ ಕಾರ್ಯಾಚರಣೆ ಸಂಪೂರ್ಣ ಮುಚ್ಚಲ್ಪಟ್ಟಿದೆ.</p>.<p>‘ಈ ಉಳಿಕೆ ಭೂಮಿಯನ್ನೂ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ₹900 ಕೋಟಿಗೆ ಮಾರಾಟ ಮಾಡಲು ಕಂಪನಿ ಪ್ರಯತ್ನಿಸುತ್ತಿದೆ. ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>