<p><strong>ಬೆಂಗಳೂರು:</strong> ಸಾರ್ವಜನಿಕ ಆಸ್ತಿ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ ಪುಟ್ಟಸ್ವಾಮಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ (ಪಿಐಎಲ್) ಮಾಹಿತಿ ಹಕ್ಕು ಕಾರ್ಯಕರ್ತ ಎನ್. ಹನುಮೇಗೌಡ ಅವರಿಗೆ ಹೈಕೋರ್ಟ್, ₹ 25 ಸಾವಿರ ದಂಡ ವಿಧಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ಕುರಿತಂತೆ ಆದೇಶಿಸಿದೆ. ಅಂತೆಯೇ, ಈ ಪ್ರಕರಣದಲ್ಲಿ ಸಾರ್ವಜನಿಕ ಸ್ಥಿರಾಸ್ತಿ ದುರುಪಯೋಗದ ಆರೋಪ ಇರುವುದರಿಂದ ಇದನ್ನು ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ಆಗಿ ದಾಖಲಿಸಿಕೊಂಡಿದೆ.</p>.<p><strong>ಯಾಕೆ ದಂಡ?:</strong> ಪುಟ್ಟಸ್ವಾಮಿ ಅವರು ಹನುಮೇಗೌಡರ ವಿರುದ್ಧ ದಾಖಲಿಸಿದ್ದ ಮಾನನಷ್ಟ ದಾವೆಯಲ್ಲಿ ಹನುಮೇಗೌಡ ಶಿಕ್ಷೆಗೆ ಒಳಗಾಗಿರುವ ಸಂಗತಿಯನ್ನು ಮುಚ್ಚಿಟ್ಟ ಕಾರಣಕ್ಕೆ ನ್ಯಾಯಪೀಠ ಈ ದಂಡ ವಿಧಿಸಿದೆ.</p>.<p>‘ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ಗೆ ಕಾನೂನು ಬಾಹಿರವಾಗಿ ಸರ್ಕಾರದ ವತಿಯಿಂದ 8 ಎಕರೆ ಜಮೀನು ಪಡೆಯಲಾಗಿದೆ’ ಎಂದು ಹನುಮೇಗೌಡ ಕಾನೂನು ಸಮರ ನಡೆಸಿದ್ದರು. ಈ ದೂರನ್ನು ಆಕ್ಷೇಪಿಸಿ ಟ್ರಸ್ಟ್ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು, ಹನುಮೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.<p>ಈ ಪ್ರಕರಣದ ವಿಚಾರಣೆ ನಡೆಸಿ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ತೀರ್ಪು ನೀಡಿದ್ದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ಆರೋಪ ಸಾಬೀತಾದ ಕಾರಣ ಹನುಮೇಗೌಡ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ₹ 25 ಸಾವಿರ ದಂಡ ವಿಧಿಸಿದ್ದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಎರಡು ತಿಂಗಳ ಜೈಲು ಶಿಕ್ಷೆ ಮತ್ತು ₹ 10 ಸಾವಿರ ಭದ್ರತೆ ನೀಡುವಂತೆ ಆದೇಶಿಸಿದ್ದರು.</p>.<p><strong>ಪ್ರಕರಣವೇನು?:</strong> ‘ಗಾಣಿಗ ಜನಾಂಗದ ಗುರುಪೀಠಕ್ಕೆ 2011ರ ಫೆಬ್ರುವರಿಯಲ್ಲಿ ಬಜೆಟ್ನಲ್ಲಿ ₹ 5 ಕೋಟಿ ಮೀಸಲು ಇರಿಸಲಾಗಿತ್ತು. ಅಂತೆಯೇ ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ನಗರೂರು ಗ್ರಾಮದ ಸರ್ವೇ ನಂಬರ್ 112ರಲ್ಲಿ ಗೋಮಾಳದ ಎಂಟು ಎಕರೆ ಜಮೀನನ್ನು ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ. ಈ ಟ್ರಸ್ಟ್ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ ಪುಟ್ಟಸ್ವಾಮಿ ಅಧ್ಯಕ್ಷರಾಗಿದ್ದರು. ಇವರು ತಮ್ಮ ಅಧಿಕಾರ ಬಳಸಿ ಈ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ. ಆದ್ದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಮತ್ತು ಭೂ ಮಂಜೂರಾತಿ ರದ್ದುಪಡಿಸಬೇಕು’ ಎಂದು ಹನುಮೇಗೌಡ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕ ಆಸ್ತಿ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ ಪುಟ್ಟಸ್ವಾಮಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ (ಪಿಐಎಲ್) ಮಾಹಿತಿ ಹಕ್ಕು ಕಾರ್ಯಕರ್ತ ಎನ್. ಹನುಮೇಗೌಡ ಅವರಿಗೆ ಹೈಕೋರ್ಟ್, ₹ 25 ಸಾವಿರ ದಂಡ ವಿಧಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ಕುರಿತಂತೆ ಆದೇಶಿಸಿದೆ. ಅಂತೆಯೇ, ಈ ಪ್ರಕರಣದಲ್ಲಿ ಸಾರ್ವಜನಿಕ ಸ್ಥಿರಾಸ್ತಿ ದುರುಪಯೋಗದ ಆರೋಪ ಇರುವುದರಿಂದ ಇದನ್ನು ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ಆಗಿ ದಾಖಲಿಸಿಕೊಂಡಿದೆ.</p>.<p><strong>ಯಾಕೆ ದಂಡ?:</strong> ಪುಟ್ಟಸ್ವಾಮಿ ಅವರು ಹನುಮೇಗೌಡರ ವಿರುದ್ಧ ದಾಖಲಿಸಿದ್ದ ಮಾನನಷ್ಟ ದಾವೆಯಲ್ಲಿ ಹನುಮೇಗೌಡ ಶಿಕ್ಷೆಗೆ ಒಳಗಾಗಿರುವ ಸಂಗತಿಯನ್ನು ಮುಚ್ಚಿಟ್ಟ ಕಾರಣಕ್ಕೆ ನ್ಯಾಯಪೀಠ ಈ ದಂಡ ವಿಧಿಸಿದೆ.</p>.<p>‘ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ಗೆ ಕಾನೂನು ಬಾಹಿರವಾಗಿ ಸರ್ಕಾರದ ವತಿಯಿಂದ 8 ಎಕರೆ ಜಮೀನು ಪಡೆಯಲಾಗಿದೆ’ ಎಂದು ಹನುಮೇಗೌಡ ಕಾನೂನು ಸಮರ ನಡೆಸಿದ್ದರು. ಈ ದೂರನ್ನು ಆಕ್ಷೇಪಿಸಿ ಟ್ರಸ್ಟ್ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು, ಹನುಮೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.<p>ಈ ಪ್ರಕರಣದ ವಿಚಾರಣೆ ನಡೆಸಿ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ತೀರ್ಪು ನೀಡಿದ್ದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ಆರೋಪ ಸಾಬೀತಾದ ಕಾರಣ ಹನುಮೇಗೌಡ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ₹ 25 ಸಾವಿರ ದಂಡ ವಿಧಿಸಿದ್ದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಎರಡು ತಿಂಗಳ ಜೈಲು ಶಿಕ್ಷೆ ಮತ್ತು ₹ 10 ಸಾವಿರ ಭದ್ರತೆ ನೀಡುವಂತೆ ಆದೇಶಿಸಿದ್ದರು.</p>.<p><strong>ಪ್ರಕರಣವೇನು?:</strong> ‘ಗಾಣಿಗ ಜನಾಂಗದ ಗುರುಪೀಠಕ್ಕೆ 2011ರ ಫೆಬ್ರುವರಿಯಲ್ಲಿ ಬಜೆಟ್ನಲ್ಲಿ ₹ 5 ಕೋಟಿ ಮೀಸಲು ಇರಿಸಲಾಗಿತ್ತು. ಅಂತೆಯೇ ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ನಗರೂರು ಗ್ರಾಮದ ಸರ್ವೇ ನಂಬರ್ 112ರಲ್ಲಿ ಗೋಮಾಳದ ಎಂಟು ಎಕರೆ ಜಮೀನನ್ನು ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ. ಈ ಟ್ರಸ್ಟ್ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ ಪುಟ್ಟಸ್ವಾಮಿ ಅಧ್ಯಕ್ಷರಾಗಿದ್ದರು. ಇವರು ತಮ್ಮ ಅಧಿಕಾರ ಬಳಸಿ ಈ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ. ಆದ್ದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಮತ್ತು ಭೂ ಮಂಜೂರಾತಿ ರದ್ದುಪಡಿಸಬೇಕು’ ಎಂದು ಹನುಮೇಗೌಡ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>