<p><strong>ಬೆಂಗಳೂರು</strong>: ಭೂ ಸ್ವಾಧೀನಕ್ಕೆ ಒಳಗಾದ ಜಮೀನಿಗೆ ಪರಿಹಾರ ಪಡೆದ ಬಳಿಕವೂ ಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಲಾದ ಅರ್ಜಿಗಳು ಏಳು ಬಾರಿ ವಜಾಗೊಂಡಿದ್ದರೂ ಆ ಮಾಹಿತಿಯನ್ನು ಮರೆಮಾಚಿ ಎಂಟನೇ ಬಾರಿಗೆ ಪುನಃ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಕುಟುಂಬವೊಂದರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಇದೊಂದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗ ಎಂಬ ಅಭಿಪ್ರಾಯದೊಂದಿಗೆ ₹10 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಬೆಂಗಳೂರಿನ ದೊಡ್ಡಬಸ್ತಿ ಮುಖ್ಯ ರಸ್ತೆಯ ಭುವನೇಶ್ವರಿ ನಗರ ನಿವಾಸಿಗಳಾದ ಗಂಗಮ್ಮ ಮತ್ತು ಕುಟುಂಬಸ್ಥರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.</p>.<p>ತೀರ್ಪು ಪ್ರಕಟವಾದ ನಾಲ್ಕು ವಾರಗಳಲ್ಲಿ ₹10 ಲಕ್ಷ ದಂಡದ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಲು ನ್ಯಾಯಪೀಠ ನಿರ್ದೇಶಿಸಿದೆ.</p>.<p>‘ಅರ್ಜಿದಾರರು ತಪ್ಪಿತಸ್ಥರಾಗಿದ್ದಾರೆ. ಶುದ್ಧಹಸ್ತದಿಂದ ನ್ಯಾಯಾಲಯಕ್ಕೆ ಬಂದಿಲ್ಲ. ವಂಚನೆ, ತಪ್ಪು ಮಾಹಿತಿ ನೀಡಿ ನ್ಯಾಯಾಂಗ ಪ್ರಕ್ರಿಯೆಯ ಪಾವಿತ್ರ್ಯ ಕಳಂಕಗೊಳಿಸಿದ್ದಾರೆ. ಇದರಿಂದ ನ್ಯಾಯದ ಘನತೆಗೆ ಅವಮಾನ ಮಾಡಿದಂತಾಗಿದೆ’ ಎಂದು ಕಠಿಣ ಶಬ್ದಗಳಲ್ಲಿ ಅರ್ಜಿದಾರರ ನಡೆಯನ್ನು ನ್ಯಾಯಪೀಠ ಖಂಡಿಸಿದೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರ್ಜಿ 1994ರಲ್ಲಿ ಸಲ್ಲಿಕೆಯಾಗಿದೆ. ಈವರೆಗೂ ಅರ್ಜಿದಾರರು ಎಂಟು ಬಾರಿ ಕಾನೂನು ಹೋರಾಟ ನಡೆಸಿದ್ದಾರೆ. ಎಲ್ಲ ಅರ್ಜಿಗಳು ವಜಾಗೊಂಡಿವೆ. ಆದರೆ, ಈ ಅಂಶವನ್ನು ಕೊನೆಯ ಅರ್ಜಿಯಲ್ಲಿ ಮರೆ ಮಾಚಲಾಗಿದೆ’ ಎಂದು ನ್ಯಾಯಪೀಠ ಕಿಡಿ ಕಾರಿದೆ.</p>.<p><strong>ಪ್ರಕರಣವೇನು</strong>?: ವೆಂಕಟೇಶ್ ಭೋವಿ ಮತ್ತು ಹನುಮಂತ ಭೋವಿ ಎಂಬುವರು ಕೆಂಗೇರಿ ಹೋಬಳಿಯ ನಾಗದೇವನ ಹಳ್ಳಿಯ ಸರ್ವೇ ಸಂಖ್ಯೆ 26ರ ಜಮೀನನ್ನು ಅನಧಿಕೃತವಾಗಿ ಬಳಕೆ ಮಾಡುತ್ತಿದ್ದರು. ನಂತರ ಸಾಗುವಳಿ ಅಡಿಯಲ್ಲಿ ಜಮೀನನ್ನು ಅರ್ಜಿದಾರರ ಹೆಸರಿಗೆ ಮಂಜೂರು ಮಾಡಲಾಗಿತ್ತು. ಈ ಜಮೀನು ಇಬ್ಬರ ಹೆಸರಿಗೆ ಬದಲಾವಣೆಗೊಂಡಿದ್ದವು. ಉದ್ದೇಶಿತ ಜಮೀನನ್ನು ಗವಿಪುರಂ ಎಕ್ಸ್ಟೆನ್ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿಯಿಂದ ಬಡಾವಣೆ ನಿರ್ಮಾಣಕ್ಕಾಗಿ 1986ರಲ್ಲಿ ಪ್ರಾಥಮಿಕ ಮತ್ತು 1987ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು.</p>.<p>ಇದರನ್ವಯ ಪ್ರತಿ ಎಕರೆಗೆ ₹65 ಸಾವಿರ ಮತ್ತು ₹15 ಸಾವಿರದಂತೆ ಬಡ್ಡಿ ಸೇರಿಸಿ ಪರಿಹಾರ ನೀಡಲಾಗಿತ್ತು. ಈ ಪರಿಹಾರ ಮೊತ್ತವನ್ನು 1987ರಲ್ಲಿ ಜಮೀನಿನ ಮಾಲೀಕರ ಖಾತೆಗಳಿಗೆ ಜಮಾ ಮಾಡಲಾಗಿತ್ತು. ಏತನ್ಮಧ್ಯೆ, ವೆಂಕಟೇಶ್ ಭೋವಿ ಮತ್ತು ಹನುಮಂತ ಭೋವಿ ಮೃತಪಟ್ಟಿದ್ದರು. ಬಳಿಕ ಜಮೀನನ್ನು ಭೂ ಸ್ವಾಧೀನದಿಂದ ಕೈಬಿಡಬೇಕು ಎಂದು ಕೋರಿ ಅವರಿಬ್ಬರ ವಾರಸುದಾರರು ನಡೆಸಿದ ಕಾನೂನು ಹೋರಾಟದ ಭಾಗವಾಗಿ ಈ ಅರ್ಜಿ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭೂ ಸ್ವಾಧೀನಕ್ಕೆ ಒಳಗಾದ ಜಮೀನಿಗೆ ಪರಿಹಾರ ಪಡೆದ ಬಳಿಕವೂ ಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಲಾದ ಅರ್ಜಿಗಳು ಏಳು ಬಾರಿ ವಜಾಗೊಂಡಿದ್ದರೂ ಆ ಮಾಹಿತಿಯನ್ನು ಮರೆಮಾಚಿ ಎಂಟನೇ ಬಾರಿಗೆ ಪುನಃ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಕುಟುಂಬವೊಂದರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಇದೊಂದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗ ಎಂಬ ಅಭಿಪ್ರಾಯದೊಂದಿಗೆ ₹10 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಬೆಂಗಳೂರಿನ ದೊಡ್ಡಬಸ್ತಿ ಮುಖ್ಯ ರಸ್ತೆಯ ಭುವನೇಶ್ವರಿ ನಗರ ನಿವಾಸಿಗಳಾದ ಗಂಗಮ್ಮ ಮತ್ತು ಕುಟುಂಬಸ್ಥರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.</p>.<p>ತೀರ್ಪು ಪ್ರಕಟವಾದ ನಾಲ್ಕು ವಾರಗಳಲ್ಲಿ ₹10 ಲಕ್ಷ ದಂಡದ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಲು ನ್ಯಾಯಪೀಠ ನಿರ್ದೇಶಿಸಿದೆ.</p>.<p>‘ಅರ್ಜಿದಾರರು ತಪ್ಪಿತಸ್ಥರಾಗಿದ್ದಾರೆ. ಶುದ್ಧಹಸ್ತದಿಂದ ನ್ಯಾಯಾಲಯಕ್ಕೆ ಬಂದಿಲ್ಲ. ವಂಚನೆ, ತಪ್ಪು ಮಾಹಿತಿ ನೀಡಿ ನ್ಯಾಯಾಂಗ ಪ್ರಕ್ರಿಯೆಯ ಪಾವಿತ್ರ್ಯ ಕಳಂಕಗೊಳಿಸಿದ್ದಾರೆ. ಇದರಿಂದ ನ್ಯಾಯದ ಘನತೆಗೆ ಅವಮಾನ ಮಾಡಿದಂತಾಗಿದೆ’ ಎಂದು ಕಠಿಣ ಶಬ್ದಗಳಲ್ಲಿ ಅರ್ಜಿದಾರರ ನಡೆಯನ್ನು ನ್ಯಾಯಪೀಠ ಖಂಡಿಸಿದೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರ್ಜಿ 1994ರಲ್ಲಿ ಸಲ್ಲಿಕೆಯಾಗಿದೆ. ಈವರೆಗೂ ಅರ್ಜಿದಾರರು ಎಂಟು ಬಾರಿ ಕಾನೂನು ಹೋರಾಟ ನಡೆಸಿದ್ದಾರೆ. ಎಲ್ಲ ಅರ್ಜಿಗಳು ವಜಾಗೊಂಡಿವೆ. ಆದರೆ, ಈ ಅಂಶವನ್ನು ಕೊನೆಯ ಅರ್ಜಿಯಲ್ಲಿ ಮರೆ ಮಾಚಲಾಗಿದೆ’ ಎಂದು ನ್ಯಾಯಪೀಠ ಕಿಡಿ ಕಾರಿದೆ.</p>.<p><strong>ಪ್ರಕರಣವೇನು</strong>?: ವೆಂಕಟೇಶ್ ಭೋವಿ ಮತ್ತು ಹನುಮಂತ ಭೋವಿ ಎಂಬುವರು ಕೆಂಗೇರಿ ಹೋಬಳಿಯ ನಾಗದೇವನ ಹಳ್ಳಿಯ ಸರ್ವೇ ಸಂಖ್ಯೆ 26ರ ಜಮೀನನ್ನು ಅನಧಿಕೃತವಾಗಿ ಬಳಕೆ ಮಾಡುತ್ತಿದ್ದರು. ನಂತರ ಸಾಗುವಳಿ ಅಡಿಯಲ್ಲಿ ಜಮೀನನ್ನು ಅರ್ಜಿದಾರರ ಹೆಸರಿಗೆ ಮಂಜೂರು ಮಾಡಲಾಗಿತ್ತು. ಈ ಜಮೀನು ಇಬ್ಬರ ಹೆಸರಿಗೆ ಬದಲಾವಣೆಗೊಂಡಿದ್ದವು. ಉದ್ದೇಶಿತ ಜಮೀನನ್ನು ಗವಿಪುರಂ ಎಕ್ಸ್ಟೆನ್ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿಯಿಂದ ಬಡಾವಣೆ ನಿರ್ಮಾಣಕ್ಕಾಗಿ 1986ರಲ್ಲಿ ಪ್ರಾಥಮಿಕ ಮತ್ತು 1987ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು.</p>.<p>ಇದರನ್ವಯ ಪ್ರತಿ ಎಕರೆಗೆ ₹65 ಸಾವಿರ ಮತ್ತು ₹15 ಸಾವಿರದಂತೆ ಬಡ್ಡಿ ಸೇರಿಸಿ ಪರಿಹಾರ ನೀಡಲಾಗಿತ್ತು. ಈ ಪರಿಹಾರ ಮೊತ್ತವನ್ನು 1987ರಲ್ಲಿ ಜಮೀನಿನ ಮಾಲೀಕರ ಖಾತೆಗಳಿಗೆ ಜಮಾ ಮಾಡಲಾಗಿತ್ತು. ಏತನ್ಮಧ್ಯೆ, ವೆಂಕಟೇಶ್ ಭೋವಿ ಮತ್ತು ಹನುಮಂತ ಭೋವಿ ಮೃತಪಟ್ಟಿದ್ದರು. ಬಳಿಕ ಜಮೀನನ್ನು ಭೂ ಸ್ವಾಧೀನದಿಂದ ಕೈಬಿಡಬೇಕು ಎಂದು ಕೋರಿ ಅವರಿಬ್ಬರ ವಾರಸುದಾರರು ನಡೆಸಿದ ಕಾನೂನು ಹೋರಾಟದ ಭಾಗವಾಗಿ ಈ ಅರ್ಜಿ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>