<p><strong>ಬೆಂಗಳೂರು:</strong> ‘ಮುಂಬರುವ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಕಡ್ಡಾಯವಾಗಿ ಮನೆ-ಮನೆ ಸಮೀಕ್ಷೆ ನಡೆಸಬೇಕಾಗಿದ್ದು, ಈ ಕಾರ್ಯವನ್ನು 2020ರ ಏಪ್ರಿಲ್ 30ರೊಳಗೆ ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>‘ಸಮೀಕ್ಷೆಗೆ ಸ್ವಸಹಾಯ ಗುಂಪು ಹಾಗೂ ಎನ್ಜಿಒಗಳನ್ನು ಬಳಸಿಕೊಳ್ಳಬಹುದು. ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೇಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.</p>.<p>‘14 ವರ್ಷದೊಳಗಿನ ಮಕ್ಕಳ ದಾಖಲೆಯನ್ನು ಪ್ರತಿ ಶೈಕ್ಷಣಿಕ ವರ್ಷ ಆರಂಭವಾಗುವ ಕನಿಷ್ಠ 6 ವಾರಗಳ ಮೊದಲೇ ತಯಾರಿಸಬೇಕು. ಶೈಕ್ಷಣಿಕ ವರ್ಷ ಆರಂಭಗೊಳ್ಳುವ 2 ತಿಂಗಳ ಮುಂಚೆಯೇ ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ಹೇಳಿದೆ.</p>.<p>‘ಗೈರು ಹಾಜರಾದ ಮಕ್ಕಳ ಪೋಷಕರಿಗೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಲು ಪ್ರಯಾಣ ಭತ್ಯೆ ನೀಡುವುದಿಲ್ಲ ಎಂಬ ನಿರ್ಧಾರ ಮರು ಪರಿಶೀಲಿಸಬೇಕು. ಶಿಕ್ಷಣ ಸಂಯೋಜಕರ (ಹಾಜರಾತಿ ಪ್ರಾಧಿಕಾರ) ಖಾಲಿ ಹುದ್ದೆಗಳನ್ನು ಒಂದು ತಿಂಗಳಲ್ಲಿ ಭರ್ತಿ ಮಾಡಬೇಕು. ಇವರಿಗೆ ಪ್ರತಿ ತಿಂಗಳು ₹ 500 ನೀಡುವ ಈಗಿನ ನಿರ್ಧಾರವನ್ನು ಸರ್ಕಾರ ಪುನರ್ ಪರಿಶೀಲಿಸಬೇಕು’ ಎಂದು ನಿರ್ದೇಶಿಸಿದೆ. ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಂಬರುವ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಕಡ್ಡಾಯವಾಗಿ ಮನೆ-ಮನೆ ಸಮೀಕ್ಷೆ ನಡೆಸಬೇಕಾಗಿದ್ದು, ಈ ಕಾರ್ಯವನ್ನು 2020ರ ಏಪ್ರಿಲ್ 30ರೊಳಗೆ ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>‘ಸಮೀಕ್ಷೆಗೆ ಸ್ವಸಹಾಯ ಗುಂಪು ಹಾಗೂ ಎನ್ಜಿಒಗಳನ್ನು ಬಳಸಿಕೊಳ್ಳಬಹುದು. ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೇಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.</p>.<p>‘14 ವರ್ಷದೊಳಗಿನ ಮಕ್ಕಳ ದಾಖಲೆಯನ್ನು ಪ್ರತಿ ಶೈಕ್ಷಣಿಕ ವರ್ಷ ಆರಂಭವಾಗುವ ಕನಿಷ್ಠ 6 ವಾರಗಳ ಮೊದಲೇ ತಯಾರಿಸಬೇಕು. ಶೈಕ್ಷಣಿಕ ವರ್ಷ ಆರಂಭಗೊಳ್ಳುವ 2 ತಿಂಗಳ ಮುಂಚೆಯೇ ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ಹೇಳಿದೆ.</p>.<p>‘ಗೈರು ಹಾಜರಾದ ಮಕ್ಕಳ ಪೋಷಕರಿಗೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಲು ಪ್ರಯಾಣ ಭತ್ಯೆ ನೀಡುವುದಿಲ್ಲ ಎಂಬ ನಿರ್ಧಾರ ಮರು ಪರಿಶೀಲಿಸಬೇಕು. ಶಿಕ್ಷಣ ಸಂಯೋಜಕರ (ಹಾಜರಾತಿ ಪ್ರಾಧಿಕಾರ) ಖಾಲಿ ಹುದ್ದೆಗಳನ್ನು ಒಂದು ತಿಂಗಳಲ್ಲಿ ಭರ್ತಿ ಮಾಡಬೇಕು. ಇವರಿಗೆ ಪ್ರತಿ ತಿಂಗಳು ₹ 500 ನೀಡುವ ಈಗಿನ ನಿರ್ಧಾರವನ್ನು ಸರ್ಕಾರ ಪುನರ್ ಪರಿಶೀಲಿಸಬೇಕು’ ಎಂದು ನಿರ್ದೇಶಿಸಿದೆ. ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>