ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್, ‘ಅರ್ಜಿಯನ್ನು 2021ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಶ್ವನಾಥ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು. ಆದರೆ, ಆ ನೋಟಿಸ್ ಅವರಿಗೆ ತಲುಪಿಲ್ಲ. ಅವರು ಉದ್ದೇಶಪೂರ್ವಕವಾಗಿ ನೋಟಿಸ್ ಸ್ವೀಕರಿಸಿಲ್ಲ. ಹಾಗಾಗಿ, ಹ್ಯಾಂಡ್ ಸಮನ್ಸ್ ನೀಡಲು ಆದೇಶಿಸಬೇಕು’ ಎಂದು ಕೋರಿದರು.