ಪಾಲಿಕೆಯ ಕಾರ್ಯ ವೈಖರಿಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ, ‘ಚೆನ್ನಾಗಿರುವ ರಸ್ತೆಯನ್ನೆಲ್ಲಾ ಅಧ್ವಾನ ಮಾಡಿಟ್ಟಿದ್ದೀರಿ, ಮರಗಳನ್ನು ಕತ್ತರಿಸಿದ್ದೀರಿ, ಜನರು ಅಲ್ಲಿ ಹೇಗೆ ಓಡಾಡಬೇಕು...? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕರಿಗೆ ಯಾಕೆ ಹೀಗೆ ಅನಗತ್ಯ ತೊಂದರೆ ನೀಡುತ್ತಿದೆ’ ಎಂದು ಬಿಬಿಎಂಪಿಯನ್ನು ಖಾರವಾಗಿ ಪ್ರಶ್ನಿಸಿತು. ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿಸಲು ಆದೇಶಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.