<p><strong>ಬೆಂಗಳೂರು</strong>: ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲಂಚದ ಆರೋಪ ಹೊರಿಸಿ ಮಾನಹಾನಿಕರ ಸುದ್ದಿ ಪ್ರಕಟಿಸಿದ ಅಂದಿನ ಸಂಜೆ ದಿನಪತ್ರಿಕೆ (ಈಗ ಬೆಳಗಿನ ದಿನಪತ್ರಿಕೆ) ‘ಹಲೋ ಮೈಸೂರು’ ಸಂಪಾದಕ ಟಿ.ಗುರುರಾಜ್ ಅವರನ್ನು ಅಪರಾಧಿ ಎಂದಿರುವ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಪ್ರಕರಣದಲ್ಲಿ ಗುರುರಾಜ್ (50) ಅವರನ್ನು ಖುಲಾಸೆಗೊಳಿಸಿ ಮೈಸೂರಿನ ಜೆ.ಎಂ.ಎಫ್.ಸಿ 3ನೇ ನ್ಯಾಯಾಲಯ 2013 ರ ಸೆಪ್ಟೆಂಬರ್ 30ರಂದು ನೀಡಿದ್ದ ಆದೇಶ ಪ್ರಶ್ನಿಸಿ ದೂರುದಾರರೂ ಆದ ಅಂದಿನ ಕೆ.ಆರ್.ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಎನ್.ಸುರೇಶ್ ಬಾಬು ಹೈಕೋರ್ಟ್ ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.</p>.<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>‘ಪತ್ರಿಕೆಯ ವರದಿಯಲ್ಲಿ ಸುರೇಶ್ ಬಾಬು ಅವರ ಘನತೆಗೆ ಚ್ಯುತಿ ಉಂಟು ಮಾಡುವ ಪದಗಳನ್ನು ಬಳಕೆ ಮಾಡಲಾಗಿದೆ. ವ್ಯಕ್ತಿತ್ವಕ್ಕೆ ಹಾನಿ ಉಂಟು ಮಾಡಲು ಆಧಾರರಹಿತ ಆರೋಪ ಮಾಡುವುದು ಖಂಡಿತವಾಗಿಯೂ ಮಾನಹಾನಿಕರ ಅಪರಾಧ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 500ರ ಅಡಿ ಗುರುರಾಜ್ ಅಪರಾಧಿಯಾಗಿದ್ದು, ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು ₹2 ಸಾವಿರ ದಂಡ ಹಾಗೂ ಕಲಂ 501ರ ಅಡಿಯ ಅಪರಾಧಕ್ಕೆ ಆರು ತಿಂಗಳ ಜೈಲುವಾಸ ಮತ್ತು ₹2 ಸಾವಿರ ದಂಡ ವಿಧಿಸಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p>ಪ್ರಕರಣವೇನು?: ‘ಸುರೇಶ್ ಬಾಬು ಒಂದಂಕಿ ಲಾಟರಿ ಆಡುವುದಕ್ಕೆ ಸಹಕರಿಸುವ ಮೂಲಕ ಲಂಚ ಪಡೆದಿದ್ದಾರೆ. ಚಾಮುಂಡಿ ಬೆಟ್ಟದ ಸಮೀಪ ವಾಹನಗಳನ್ನು ಪಾರ್ಕ್ ಮಾಡಲು ಅವಕಾಶ ಮಾಡಿಕೊಟ್ಟು ಪಾರ್ಕಿಂಗ್ ಏಜೆಂಟ್ಗಳಿಂದಲೂ ಲಂಚ ಪಡೆದಿದ್ದಾರೆ’ ಎಂದು ಆರೋಪಿಸಿ 2004ರ ಆಗಸ್ಟ್ 3 ರಂದು ಹಲೋ ಮೈಸೂರು ಸಂಜೆ ದಿನಪತ್ರಿಕೆಯಲ್ಲಿ ಮಾನಹಾನಿಕರ ವರದಿ ಪ್ರಕಟಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲಂಚದ ಆರೋಪ ಹೊರಿಸಿ ಮಾನಹಾನಿಕರ ಸುದ್ದಿ ಪ್ರಕಟಿಸಿದ ಅಂದಿನ ಸಂಜೆ ದಿನಪತ್ರಿಕೆ (ಈಗ ಬೆಳಗಿನ ದಿನಪತ್ರಿಕೆ) ‘ಹಲೋ ಮೈಸೂರು’ ಸಂಪಾದಕ ಟಿ.ಗುರುರಾಜ್ ಅವರನ್ನು ಅಪರಾಧಿ ಎಂದಿರುವ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಪ್ರಕರಣದಲ್ಲಿ ಗುರುರಾಜ್ (50) ಅವರನ್ನು ಖುಲಾಸೆಗೊಳಿಸಿ ಮೈಸೂರಿನ ಜೆ.ಎಂ.ಎಫ್.ಸಿ 3ನೇ ನ್ಯಾಯಾಲಯ 2013 ರ ಸೆಪ್ಟೆಂಬರ್ 30ರಂದು ನೀಡಿದ್ದ ಆದೇಶ ಪ್ರಶ್ನಿಸಿ ದೂರುದಾರರೂ ಆದ ಅಂದಿನ ಕೆ.ಆರ್.ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಎನ್.ಸುರೇಶ್ ಬಾಬು ಹೈಕೋರ್ಟ್ ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.</p>.<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>‘ಪತ್ರಿಕೆಯ ವರದಿಯಲ್ಲಿ ಸುರೇಶ್ ಬಾಬು ಅವರ ಘನತೆಗೆ ಚ್ಯುತಿ ಉಂಟು ಮಾಡುವ ಪದಗಳನ್ನು ಬಳಕೆ ಮಾಡಲಾಗಿದೆ. ವ್ಯಕ್ತಿತ್ವಕ್ಕೆ ಹಾನಿ ಉಂಟು ಮಾಡಲು ಆಧಾರರಹಿತ ಆರೋಪ ಮಾಡುವುದು ಖಂಡಿತವಾಗಿಯೂ ಮಾನಹಾನಿಕರ ಅಪರಾಧ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 500ರ ಅಡಿ ಗುರುರಾಜ್ ಅಪರಾಧಿಯಾಗಿದ್ದು, ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು ₹2 ಸಾವಿರ ದಂಡ ಹಾಗೂ ಕಲಂ 501ರ ಅಡಿಯ ಅಪರಾಧಕ್ಕೆ ಆರು ತಿಂಗಳ ಜೈಲುವಾಸ ಮತ್ತು ₹2 ಸಾವಿರ ದಂಡ ವಿಧಿಸಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p>ಪ್ರಕರಣವೇನು?: ‘ಸುರೇಶ್ ಬಾಬು ಒಂದಂಕಿ ಲಾಟರಿ ಆಡುವುದಕ್ಕೆ ಸಹಕರಿಸುವ ಮೂಲಕ ಲಂಚ ಪಡೆದಿದ್ದಾರೆ. ಚಾಮುಂಡಿ ಬೆಟ್ಟದ ಸಮೀಪ ವಾಹನಗಳನ್ನು ಪಾರ್ಕ್ ಮಾಡಲು ಅವಕಾಶ ಮಾಡಿಕೊಟ್ಟು ಪಾರ್ಕಿಂಗ್ ಏಜೆಂಟ್ಗಳಿಂದಲೂ ಲಂಚ ಪಡೆದಿದ್ದಾರೆ’ ಎಂದು ಆರೋಪಿಸಿ 2004ರ ಆಗಸ್ಟ್ 3 ರಂದು ಹಲೋ ಮೈಸೂರು ಸಂಜೆ ದಿನಪತ್ರಿಕೆಯಲ್ಲಿ ಮಾನಹಾನಿಕರ ವರದಿ ಪ್ರಕಟಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>