ಸುಪ್ರೀಂ ಕೋರ್ಟ್ ಆದೇಶದಂತೆ ರಚನೆಯಾಗಿರುವ ಸಮಿತಿಗೆಆಸ್ಪತ್ರೆಗಳಲ್ಲಿ ನೈರ್ಮಲ್ಯ,ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸಾರಿಗೆ ಸೌಲಭ್ಯ, ಅಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟದ ಮೇಲ್ವಿಚಾರಣೆ ಜವಾಬ್ದಾರಿ ವಹಿಸಲಾಗಿದೆ. ಬಿಬಿಎಂಪಿ ಮಟ್ಟದ ಸಮಿತಿ ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಕಾರ್ಯ ವೈಖರಿ ಮೇಲ್ವಿಚಾರಣೆ ಮಾಡುವಂತೆ ರಾಜ್ಯ ಮಟ್ಟದ ಸಮಿತಿಗೆ ತಿಳಿಸಲಾಗಿದೆ.