<p><strong>ಬೆಂಗಳೂರು:</strong> ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸರಿಯಾದ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಸುಪ್ರೀಂ ಕೋರ್ಟ್ ಆದೇಶ ಜಾರಿಗೆ ತರಲು ಪಾಲಿಕೆ ತಗೆದುಕೊಂಡಿರುವ ಕ್ರಮಗಳು ಆಘಾತಕಾರಿ ಸ್ಥಿತಿಯನ್ನು ಬಹಿರಂಗಪಡಿಸುತ್ತವೆ’ ಎಂದು ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>2009ರ ಸೆಪ್ಟೆಂಬರ್ 29ರ ಬಳಿಕ 277 ಅಕ್ರಮ ಧಾರ್ಮಿಕ ಕಟ್ಟಡಗಳು ನಿರ್ಮಾಣವಾಗಿವೆ ಎಂಬ ವರದಿಯನ್ನು ಪೀಠ ಪರಿಶೀಲಿಸಿತು. ಅಕ್ರಮ ಕಟ್ಟಡಗಳ ತೆರವು ವಿಷಯದಲ್ಲಿ ಯಾವುದೇ ಬಾಹ್ಯ ಒತ್ತಡಗಳು ಇರಕೂಡದು ಎಂದು ತಿಳಿಸಿತು.</p>.<p>‘1,893 ಅನಧಿಕೃತ ಕಟ್ಟಡಗಳಿದ್ದು, ಅವುಗಳಲ್ಲಿ 1,548 ಕಟ್ಟಡಗಳನ್ನು ಕ್ರಮಬದ್ಧಗೊಳಿಸಬಹುದು. 105 ಕಟ್ಟಡಗಳನ್ನು ಸ್ಥಳಾಂತರಿಸಬಹುದು ಮತ್ತು 240 ಕಟ್ಟಡಗಳನ್ನು ತೆರವುಗೊಳಿಸಲಾಗುವುದು’ ಎಂದು ಈ ಹಿಂದಿನ ಪ್ರಮಾಣ ಪತ್ರದಲ್ಲಿ ಬಿಬಿಎಂಪಿ ವಿವರಿಸಿತ್ತು. 277 ಕಟ್ಟಡಗಳನ್ನು ಗುರುತಿಸಲಾಗಿದೆ ಎಂದು ಗುರುವಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಪಾಲಿಕೆ ತಿಳಿಸಿತು.</p>.<p>ಕಟ್ಟಡಗಳ ತೆರವಿಗೆ ಕಾಲಮಿತಿ ನಿಗದಿ ಮಾಡಿಕೊಂಡು ಮೂರು ವಾರಗಳಲ್ಲಿ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಮುಖ್ಯ ಆಯುಕ್ತರಿಗೆ ಆದೇಶಿಸಿದ ಪೀಠ, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸರಿಯಾದ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಸುಪ್ರೀಂ ಕೋರ್ಟ್ ಆದೇಶ ಜಾರಿಗೆ ತರಲು ಪಾಲಿಕೆ ತಗೆದುಕೊಂಡಿರುವ ಕ್ರಮಗಳು ಆಘಾತಕಾರಿ ಸ್ಥಿತಿಯನ್ನು ಬಹಿರಂಗಪಡಿಸುತ್ತವೆ’ ಎಂದು ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>2009ರ ಸೆಪ್ಟೆಂಬರ್ 29ರ ಬಳಿಕ 277 ಅಕ್ರಮ ಧಾರ್ಮಿಕ ಕಟ್ಟಡಗಳು ನಿರ್ಮಾಣವಾಗಿವೆ ಎಂಬ ವರದಿಯನ್ನು ಪೀಠ ಪರಿಶೀಲಿಸಿತು. ಅಕ್ರಮ ಕಟ್ಟಡಗಳ ತೆರವು ವಿಷಯದಲ್ಲಿ ಯಾವುದೇ ಬಾಹ್ಯ ಒತ್ತಡಗಳು ಇರಕೂಡದು ಎಂದು ತಿಳಿಸಿತು.</p>.<p>‘1,893 ಅನಧಿಕೃತ ಕಟ್ಟಡಗಳಿದ್ದು, ಅವುಗಳಲ್ಲಿ 1,548 ಕಟ್ಟಡಗಳನ್ನು ಕ್ರಮಬದ್ಧಗೊಳಿಸಬಹುದು. 105 ಕಟ್ಟಡಗಳನ್ನು ಸ್ಥಳಾಂತರಿಸಬಹುದು ಮತ್ತು 240 ಕಟ್ಟಡಗಳನ್ನು ತೆರವುಗೊಳಿಸಲಾಗುವುದು’ ಎಂದು ಈ ಹಿಂದಿನ ಪ್ರಮಾಣ ಪತ್ರದಲ್ಲಿ ಬಿಬಿಎಂಪಿ ವಿವರಿಸಿತ್ತು. 277 ಕಟ್ಟಡಗಳನ್ನು ಗುರುತಿಸಲಾಗಿದೆ ಎಂದು ಗುರುವಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಪಾಲಿಕೆ ತಿಳಿಸಿತು.</p>.<p>ಕಟ್ಟಡಗಳ ತೆರವಿಗೆ ಕಾಲಮಿತಿ ನಿಗದಿ ಮಾಡಿಕೊಂಡು ಮೂರು ವಾರಗಳಲ್ಲಿ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಮುಖ್ಯ ಆಯುಕ್ತರಿಗೆ ಆದೇಶಿಸಿದ ಪೀಠ, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>