ಬೆಂಗಳೂರು: ಬಿಬಿಎಂಪಿ ವಾರ್ಡ್ವಾರು ಮೀಸಲಾತಿ ಅಂತಿಮಗೊಳಿಸಿ ನಗರಾ ಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಲು ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಈಜಿಪುರದ ಕೆ.ಮಹದೇವ ಸಲ್ಲಿಸಿ ರುವ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ, ಬಿಬಿಎಂಪಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯ ಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಸೆ.1ಕ್ಕೆ ವಿಚಾರಣೆ ಮುಂದೂಡಿತು.
ಇದೇ ವೇಳೆ ನ್ಯಾಯಪೀಠ, ‘ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ದಂತೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಗಳ ವಿಚಾರಣೆ ಇದೇ 26ರಂದು ನಡೆಯ ಲಿದ್ದು, ಅಲ್ಲಿ ಯಾವ ತೀರ್ಮಾನ ಕೈಗೊಳ್ಳ ಲಾಗುತ್ತದೆ ಎಂಬುದನ್ನು ಕಾದು ನೋಡೋಣ’ ಎಂದು ತಿಳಿಸಿತು.