ವಿಚಾರಣೆ ವೇಳೆ ಬಿಬಿಎಂಪಿ ಪರ ವಾದ ಮಂಡಿಸಿದ ವಕೀಲ ವಿ.ಶ್ರೀನಿಧಿ, ‘ಬಿಬಿಎಂಪಿ ರಸ್ತೆ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕೆಲಸವನ್ನು ಸಮರ್ಪಕವಾಗಿಯೇ ಮಾಡುತ್ತಿದೆ. ಆದರೆ, ಬೆಂಗಳೂರು ಜಲಮಂಡಳಿ ಕುಡಿಯುವ ನೀರಿನ ಪೈಪ್ ಅಳವಡಿಕೆ ಮತ್ತು ಒಳಚರಂಡಿ ಕೊಳವೆ ಅಳವಡಿಕೆ, ಮೆಟ್ರೊ ಕಾಮಗಾರಿಯಂತಹ ಕಾರಣಗಳಿಂದಾಗಿ ಗುಂಡಿಗಳಾಗುತ್ತಿವೆ’ ಎಂದರು.