<p><strong>ಬೆಂಗಳೂರು: </strong>‘ಯುವ ವಕೀಲರಿಗೆ ವೃತ್ತಿಯ ಆರಂಭದಲ್ಲಿ 24 ತಿಂಗಳವರೆಗೆ ನೀಡಲಾಗುತ್ತಿರುವ ₹ 2 ಸಾವಿರ ಸ್ಟೈಪೆಂಡ್ ಮೊತ್ತವನ್ನು ₹ 5 ಸಾವಿರಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಗುರುವಾರ ನಡೆದ ಕಾನೂನು ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು, ಈ ಕುರಿತ ಬೇಡಿಕೆ ಪರಿಶೀಲಿಸಲಾಗುವುದು ಎಂದು ಹೇಳಿದರು.</p>.<p>‘ಎಸ್.ಸಿ, ಎಸ್.ಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ) ಹಾಗೂ ಟಿ.ಎಸ್.ಪಿ (ಬುಡಕಟ್ಟು ಉಪ ಯೋಜನೆ) ಯೋಜನೆಯಡಿ ಅನುದಾನ ಸಹಿತ ಮತ್ತು ಸರ್ಕಾರಿ ಕಾನೂನು ಕಾಲೇಜುಗಳ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದ್ದು, ಮುಂದಿನ ವರ್ಷದಿಂದ ಈ ಯೋಜನೆಯನ್ನು ಖಾಸಗಿ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳಿಗೂ ವಿಸ್ತರಿಸುವ ಉದ್ದೇಶವಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ, ‘ಹೈಕೋರ್ಟ್ ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಿ’ ಎಂದೂ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead"><strong>ನೇಮಕ: </strong>ಕಳೆದ ಒಂದೂವರೆ ವರ್ಷದಿಂದ ‘ರೀಸರ್ಚ್ ಲಾ ಆಂಡ್ ಆರ್ಡರ್ ಇನ್ಸ್ಟಿಟ್ಯೂಟ್’ಗೆ ಮುಖ್ಯಸ್ಥರ ನೇಮಕಾತಿ ಆಗಿಲ್ಲ. ಶೀಘ್ರವೇ ಈ ಸ್ಥಾನ ಭರ್ತಿ ಮಾಡಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಂತೆಯೇ ಸರ್ಕಾರದ ವತಿಯಿಂದ ನೇಮಕಗೊಳ್ಳುವ ‘ಪ್ರಿನ್ಸಿಪಲ್ ಗವರ್ನಮೆಂಟ್ ಅಡ್ವೋಕೇಟ್’ ನೇಮಕಕ್ಕೂ ಗಮನಹರಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಯುವ ವಕೀಲರಿಗೆ ವೃತ್ತಿಯ ಆರಂಭದಲ್ಲಿ 24 ತಿಂಗಳವರೆಗೆ ನೀಡಲಾಗುತ್ತಿರುವ ₹ 2 ಸಾವಿರ ಸ್ಟೈಪೆಂಡ್ ಮೊತ್ತವನ್ನು ₹ 5 ಸಾವಿರಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಗುರುವಾರ ನಡೆದ ಕಾನೂನು ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು, ಈ ಕುರಿತ ಬೇಡಿಕೆ ಪರಿಶೀಲಿಸಲಾಗುವುದು ಎಂದು ಹೇಳಿದರು.</p>.<p>‘ಎಸ್.ಸಿ, ಎಸ್.ಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ) ಹಾಗೂ ಟಿ.ಎಸ್.ಪಿ (ಬುಡಕಟ್ಟು ಉಪ ಯೋಜನೆ) ಯೋಜನೆಯಡಿ ಅನುದಾನ ಸಹಿತ ಮತ್ತು ಸರ್ಕಾರಿ ಕಾನೂನು ಕಾಲೇಜುಗಳ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದ್ದು, ಮುಂದಿನ ವರ್ಷದಿಂದ ಈ ಯೋಜನೆಯನ್ನು ಖಾಸಗಿ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳಿಗೂ ವಿಸ್ತರಿಸುವ ಉದ್ದೇಶವಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ, ‘ಹೈಕೋರ್ಟ್ ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಿ’ ಎಂದೂ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead"><strong>ನೇಮಕ: </strong>ಕಳೆದ ಒಂದೂವರೆ ವರ್ಷದಿಂದ ‘ರೀಸರ್ಚ್ ಲಾ ಆಂಡ್ ಆರ್ಡರ್ ಇನ್ಸ್ಟಿಟ್ಯೂಟ್’ಗೆ ಮುಖ್ಯಸ್ಥರ ನೇಮಕಾತಿ ಆಗಿಲ್ಲ. ಶೀಘ್ರವೇ ಈ ಸ್ಥಾನ ಭರ್ತಿ ಮಾಡಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಂತೆಯೇ ಸರ್ಕಾರದ ವತಿಯಿಂದ ನೇಮಕಗೊಳ್ಳುವ ‘ಪ್ರಿನ್ಸಿಪಲ್ ಗವರ್ನಮೆಂಟ್ ಅಡ್ವೋಕೇಟ್’ ನೇಮಕಕ್ಕೂ ಗಮನಹರಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>