ಪತ್ರದಲ್ಲಿ ಏನಿದೆ?: ‘ಹೈಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ಸಹಾಯಕ ಎಂಜಿನಿಯರ್ ಎನ್.ಎಸ್. ರೇವಣ್ಣ ಅವರು ಇದೇ ತಿಂಗಳ ಮೊದಲ ವಾರದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 50ಕ್ಕೂ ಹೆಚ್ಚು ವ್ಯಾಪಾರಿಗಳು ಅಂಡರ್ಪಾಸ್ನಲ್ಲಿ ಅಕ್ರಮವಾಗಿ ಮಳಿಗೆ ನಿರ್ಮಿಸಿದ್ದು ಕಂಡುಬಂದಿತ್ತು. ಅವುಗಳನ್ನು ಉಪ್ಪಾರಪೇಟೆ ಹಾಗೂ ಕಾಟನ್ಪೇಟೆ ಠಾಣೆ ಪೊಲೀಸರ ಸಹಾಯದೊಂದಿಗೆ ಆಗಸ್ಟ್ 16ರಂದು ತೆರವುಗೊಳಿಸಲಾಗಿದೆ’ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.